ಸುಪ್ರೀಂ ಕೋರ್ಟ್ 
ದೇಶ

ಚುನಾವಣಾ ಆಯುಕ್ತರ ನೇಮಕದಲ್ಲಿ ಕೈ ಚಳಕ?: ಕಡತ ಹಾಜರುಪಡಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ನವದೆಹಲಿ: ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಕ್ಕೆ ಸಂಬಂಧಪಟ್ಟ ಕಡತಗಳನ್ನು ತನ್ನೆದುರು ಹಾಜರುಪಡಿಸುವುದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಅರುಣ್ ಗೋಯಲ್ ಅವರು ನ.19 ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು.

ನ್ಯಾ. ಕೆಎಂ ಜೋಸೆಫ್ ನೇತೃತ್ವದ ಪಂಚ ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ, ಕೇಂದ್ರಕ್ಕೆ ಸೂಚನೆ ನೀಡಿದ್ದು, ಗೋಯಲ್ ಸ್ವಯಂ ನಿವೃತ್ತಿ ಪಡೆದಿದ್ದರು. ಆದರೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿರುವುದರ ಹಿಂದೆ ಯಾರದ್ದಾದರೂ ಕೈಚಳಕ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ಅದಕ್ಕಾಗಿ ನೇಮಕಕ್ಕೆ ಸಂಬಂಧಿಸಿದ ಕಡತವನ್ನು ಹಾಜರುಪಡಿಸಬೇಕೆಂದು ಕೋರ್ಟ್ ಸರ್ಕಾರಕ್ಕೆ ಹೇಳಿದೆ. ವಿಚಾರಣೆ ವೇಳೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ಆಕ್ಷೇಪಣೆಗಳನ್ನು ನ್ಯಾಯಪೀಠ ತಿರಸ್ಕರಿಸಿದೆ. 

"ಕೋರ್ಟ್ ಚುನಾವಣಾ ಆಯುಕ್ತ ಹಾಗೂ ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಗಂಭೀರ ವಿಷಯದೊಂದಿಗೆ ವ್ಯವಹರಿಸುತ್ತಿದೆ. ಇದನ್ನು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರು ಪ್ರಸ್ತಾಪಿಸಿರುವ ವಿಷಯ ಎಂದಷ್ಟೇ ನೋಡುವುದಕ್ಕೆ ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

ಸಾಂವಿಧಾನಿಕ ಪೀಠದ ವಿಚಾರಣೆ ನಡುವೆ ಕೋರ್ಟ್ ಕಡತವನ್ನು ನೋಡುವುದಕ್ಕೆ ನನ್ನ ಅಭ್ಯಂತರವಿದೆ ಎಂದು  ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಹೇಳಿದ್ದಾರೆ. ಕಳೆದ ಗುರುವಾರ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವುದಾಗಿ ಹೇಳಿರುವ ಕೋರ್ಟ್, ನ.19 ರಿಂದಲೇ ಜಾರಿಗೆ ಬರುವಂತೆ ನೇಮಕಾತಿ ಮಾಡಲಾಗಿದೆ. ಆದ್ದರಿಂದ ಈ ನಡೆಗೆ ಏನು ಪ್ರಚೋದನೆ ಇರಬಹುದು ಎಂಬುದನ್ನು ನೋಡಬೇಕು ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT