ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ದೂರವಾಣಿ ಮೂಲಕ ಮಹಿಳೆಗೆ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲು

ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಪತಿ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ತರನ್ನುಮ್, ನ್ಯಾಯ ಕೋರಿ ರೋಹ್ತಾಸ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ, ತ್ರಿವಳಿ ತಲಾಖ್ ನೀಡಿದ ಆರೋಪ ಸಾಬೀತಾದರೆ ಆರೋಪಿಯು ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ನನ್ನ ಪತಿ ರಾಂಚಿಯಲ್ಲಿ ನೆಲೆಸಿದ್ದು, ಬೇರೆ ಹುಡುಗಿಯನ್ನು ಮದುವೆಯಾಗಿದ್ದಾರೆ. ಆದರೆ, ನನಗೆ ಆ ಬಗ್ಗೆ ತಿಳಿದಿರಲಿಲ್ಲ. ಡೆಹ್ರಿ ಪಟ್ಟಣದ ನೀಲ್ ಕೋಠಿ ಪ್ರದೇಶಕ್ಕೆ ಬಂದಿದ್ದ ಕೆಲವು ಸಂಬಂಧಿಕರು, ನನ್ನ ಪತಿ ಶೋಯೆಬ್‌ನ ಕೃತ್ಯವನ್ನು ನಾನು ಏಕೆ ವಿರೋಧಿಸಲಿಲ್ಲ ಎಂದು ಅವರು ನನ್ನನ್ನು ಕೇಳಿದರು. ಈ ಬಗ್ಗೆ ವಿಚಾರಿಸಲು ಶೋಯೆಬ್‌ನನ್ನು ಸಂಪರ್ಕಿಸಿದಾಗ, ಆತ ನನ್ನನ್ನು ನಿಂದಿಸಿ ಮೂರು ಬಾರಿ ತಲಾಖ್ ಹೇಳಿದ್ದಾರೆ. ಬಳಿಕ ರೋಹ್ತಾಸ್‌ನಲ್ಲಿರುವ ಅವರ ಮನೆಯಿಂದ ಹೊರಹೋಗುವಂತೆ ಹೇಳಿದರು ಮತ್ತು ಫೋನ್ ಸಂಪರ್ಕ ಕಡಿತಗೊಳಿಸಿದರು' ಎಂದು ತರನ್ನುಮ್ ಹೇಳಿದರು.

'ನಾನು 2014ರ ಮೇ 30 ರಂದು ಶೋಯೆಬ್ ಅವರನ್ನು ವಿವಾಹವಾದೆ. ಅವರು ನನ್ನನ್ನು ರಾಂಚಿಗೆ ಕರೆದೊಯ್ದರು. ಆದರೆ, ನನ್ನ ಜೊತೆಗೆ ಅವರು ಅತ್ಯಂತ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದರು. ಬೇರೆ ಹುಡುಗಿಯರನ್ನು ಮನೆಗೆ ಕರೆತಂದು ಗಂಟೆಗಟ್ಟಲೆ ನನ್ನನ್ನು ಹೊರಗೆ ಇರುವಂತೆ ಒತ್ತಾಯಿಸುತ್ತಿದ್ದರು. ನಾನು 10 ದಿನಗಳ ನಂತರ ರೋಹ್ತಾಸ್‌ಗೆ ಮರಳಿದೆ. ಈ ಬಗ್ಗೆ ಶೋಯೆಬ್‌ನ ತಾಯಿಗೆ ತಿಳಿಸಿದಾಗ, ಮೊದಲೇ ಅದರ ಬಗ್ಗೆ ತಿಳಿದಿದ್ದರು' ಎಂದು ಅವರು ಹೇಳಿದರು.

'ಮದುವೆಯ ಆರಂಭಿಕ ಹಂತದಲ್ಲಿ ಶೋಯೆಬ್ ಹಣಕ್ಕೆ ಬೇಡಿಕೆಯಿಟ್ಟಿದ್ದು, ನನ್ನ ತಂದೆ ತಾಯಿ ಆತನಿಗೆ ಹಣ ನೀಡಿದ್ದರು. ದಿನದಿಂದ ದಿನಕ್ಕೆ ಆತನ ಬೇಡಿಕೆ ಹೆಚ್ಚಾದಂತೆ ನನ್ನ ಪೋಷಕರು ಹಣ ನೀಡಲು ನಿರಾಕರಿಸಿದರು. ಈಗ ನನಗೆ ಐದು ವರ್ಷದ ಮಗಳಿದ್ದಾಳೆ. ನಮ್ಮ ಭವಿಷ್ಯವು ಕತ್ತಲೆಯಲ್ಲಿದೆ' ಎಂದು ತರುನ್ನುಮ್ ಹೇಳಿದರು.

ರೋಹ್ತಾಸ್‌ನ ಮಹಿಳಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಲಕ್ಷ್ಮಿ ಪಟೇಲ್, 'ನಾವು ಅರ್ಜಿಯನ್ನು ಸ್ವೀಕರಿಸಿದ್ದೇವೆ ಮತ್ತು ಎಫ್‌ಐಆರ್ ದಾಖಲಿಸಿದ್ದೇವೆ. ಸದ್ಯ ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT