ಚುನಾವಣಾ ಆಯುಕ್ತ ಅರುಣ್ ಗೋಯಲ್ 
ದೇಶ

ಕ್ಷಿಪ್ರಗತಿಯಲ್ಲಿ ಚುನಾವಣಾ ಆಯುಕ್ತ ಅರುಣ್ ಗೋಯಲ್ ನೇಮಕ ಪ್ರಕ್ರಿಯೆ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಯ ಸುರಿಮಳೆ

ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ(EC) ನೇಮಕಾತಿ ಮಾಡಿದ್ದರಲ್ಲಿ ಅಳವಡಿಸಿಕೊಂಡ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಿರುವ ಸುಪ್ರೀಂ ಕೋರ್ಟ್, ಅವರ ಕಡತಕ್ಕೆ ತರಾತುರಿಯಲ್ಲಿ ಆತುರದಲ್ಲಿ ಅನುಮತಿ ನೀಡಲಾಗಿದೆ ಎಂದು ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದೆ.

ನವದೆಹಲಿ: ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ(EC) ನೇಮಕಾತಿ ಮಾಡಿದ್ದರಲ್ಲಿ ಅಳವಡಿಸಿಕೊಂಡ ಪ್ರಕ್ರಿಯೆಯನ್ನು ಪ್ರಶ್ನೆ ಮಾಡಿರುವ ಸುಪ್ರೀಂ ಕೋರ್ಟ್, ಅವರ ಕಡತಕ್ಕೆ ತರಾತುರಿಯಲ್ಲಿ ಆತುರದಲ್ಲಿ ಅನುಮತಿ ನೀಡಲಾಗಿದೆ ಎಂದು ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದೆ.

ಗೋಯಲ್ ಅವರ ನೇಮಕಕ್ಕೆ ಸಂಬಂಧಿಸಿದ ಕಡತವನ್ನು "ಮಿಂಚಿನ ವೇಗ" ದಲ್ಲಿ ತೆರವುಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅದಕ್ಕೆ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಸ್ವಲ್ಪ ಹೊತ್ತು ಸುಮ್ಮನಿರಿ, ಈ ವಿಷಯವನ್ನು ಸಂಪೂರ್ಣವಾಗಿ ಪರಿಶೀಲಿಸುವಂತೆ ಮನವಿ ಮಾಡಿದರು.

ಇದು ಯಾವ ರೀತಿಯ ಮೌಲ್ಯಮಾಪನ ಆದಾಗ್ಯೂ, ನಾವು ಅರುಣ್ ಗೋಯಲ್ ಅವರ ರುಜುವಾತುಗಳ ಅರ್ಹತೆಯನ್ನು ಪ್ರಶ್ನಿಸುತ್ತಿಲ್ಲ, ಅವರ ನೇಮಕಾತಿಯ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಪ್ರಶ್ನಿಸಿತು.

ಅದಕ್ಕೆ ಅಟಾರ್ನಿ ಜನರಲ್ ಅವರು, ದಯವಿಟ್ಟು ಸ್ವಲ್ಪ ಸಮಯ ಬಾಯಿ ಮುಚ್ಚಿಕೊಂಡಿರಿ, ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಶೀಲಿಸುವಂತೆ ನಾನು ಕೇಳಿಕೊಳ್ಳುತ್ತಿದ್ದೇನೆ ಎಂದರು.

ಸುಪ್ರೀಂ ಕೋರ್ಟ್ ನೀಡಿದ ಬುಧವಾರದ ನಿರ್ದೇಶನದ ಅನುಸಾರವಾಗಿ ಕೇಂದ್ರದಿಂದ ಪೀಠದ ಮುಂದೆ ಇರಿಸಲಾದ ಗೋಯಲ್ ಅವರ ನೇಮಕಾತಿಯ ಮೂಲ ಕಡತವನ್ನು ಅದು ಪರಿಶೀಲಿಸಿತು. 1985ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗೋಯಲ್ ಒಂದೇ ದಿನದಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದಾರೆ, ಅವರ ಕಡತವನ್ನು ಕಾನೂನು ಸಚಿವಾಲಯ ಒಂದೇ ದಿನದಲ್ಲಿ ತೆರವುಗೊಳಿಸಿದೆ, ನಾಲ್ಕು ಹೆಸರುಗಳ ಸಮಿತಿಯನ್ನು ಪ್ರಧಾನ ಮಂತ್ರಿಯ ಮುಂದೆ ಮಂಡಿಸಿ ಗೋಯಲ್ ಅವರ ಹೆಸರಿಗೆ 24 ಗಂಟೆಗಳ ಒಳಗೆ ರಾಷ್ಟ್ರಪತಿಗಳಿಂದ ಒಪ್ಪಿಗೆ ಸಿಕ್ಕಿತು.

ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠವು ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT