ಆಧಾರ್ ಸಾಂದರ್ಭಿಕ ಚಿತ್ರ 
ದೇಶ

ಆಧಾರ್ ಒಪ್ಪಿಕೊಳ್ಳುವ ಮುನ್ನ ಅದನ್ನು ಪರಿಶೀಲಿಸಿ: ರಾಜ್ಯ ಸರ್ಕಾರಗಳಿಗೆ, ಸಂಸ್ಥೆಗಳಿಗೆ ಯುಐಡಿಎಐ ಸೂಚನೆ

ಆಧಾರ್ ದುರುಪಯೋಗವನ್ನು ತಡೆಯಲು ಭೌತಿಕ ಅಥವಾ ಎಲೆಕ್ಟ್ರಾನಿಕ್ ರೂಪದಲ್ಲಿ ಆಧಾರ್ ಕಾರ್ಡ್ ಅನ್ನು ಒಪ್ಪಿಕೊಳ್ಳುವ ಮೊದಲು ಅದನ್ನು ಪರಿಶೀಲಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ರಾಜ್ಯ....

ನವದೆಹಲಿ: ಆಧಾರ್ ದುರುಪಯೋಗವನ್ನು ತಡೆಯಲು ಭೌತಿಕ ಅಥವಾ ಎಲೆಕ್ಟ್ರಾನಿಕ್ ರೂಪದಲ್ಲಿ ಆಧಾರ್ ಕಾರ್ಡ್ ಅನ್ನು ಒಪ್ಪಿಕೊಳ್ಳುವ ಮೊದಲು ಅದನ್ನು ಪರಿಶೀಲಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ರಾಜ್ಯ ಸರ್ಕಾರಗಳಿಗೆ ಮತ್ತು ಸಂಸ್ಥೆಗಳಿಗೆ ಸೂಚಿಸಿದೆ ಎಂದು ಅಧಿಕೃತ ಪ್ರಕಟಣೆ ಗುರುವಾರ ತಿಳಿಸಿದೆ.

ಯಾವುದೇ ವ್ಯಕ್ತಿ ನೀಡುವ ಆಧಾರ್ ಪತ್ರ, ಇ-ಆಧಾರ್, ಆಧಾರ್ ಪಿವಿಸಿ ಕಾರ್ಡ್, ಆಧಾರ್‌ನ ಯಾವುದೇ ರೂಪದ ನೈಜತೆಯನ್ನು ಸ್ಥಾಪಿಸಲು ಆಧಾರ್ ಹೊಂದಿರುವವರ ಒಪ್ಪಿಗೆಯನ್ನು ಅನುಸರಿಸಿ ಆಧಾರ್ ಸಂಖ್ಯೆಯನ್ನು ಪರಿಶೀಲಿಸುವುದು ಸರಿಯಾದ ಕ್ರಮ ಎಂದು ಯುಐಡಿಎಐ ಹೇಳಿದೆ.

"ಆಧಾರ್ ಬಳಕೆಗೂ ಮುನ್ನ ಪರಿಶೀಲನೆಯ ಅಗತ್ಯವನ್ನು ಒತ್ತಿಹೇಳಿರುವ ಯುಐಡಿಎಐ, ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಸಲ್ಲಿಸಿದಾಗಲೆಲ್ಲ ಅದನ್ನು ಪರಿಶೀಲಿಸಬೇಕು ಮತ್ತು ಈ ಅಗತ್ಯ ನಿರ್ದೇಶನವನ್ನು ನೀಡುವಂತೆ ರಾಜ್ಯ ಸರ್ಕಾರಗಳಿಗೆ ಯುಐಡಿಎಐ ಮನವಿ ಮಾಡಿದೆ.

ಆಧಾರ್ ಪರಿಶೀಲನೆಯ ಅಗತ್ಯವನ್ನು ಒತ್ತಿಹೇಳಲು ಮತ್ತು ಅನುಸರಿಸಬೇಕಾದ ಪ್ರೋಟೋಕಾಲ್ ಅನ್ನು ನಿರ್ದಿಷ್ಟಪಡಿಸಲು ಯುಐಡಿಎಐ ಸುತ್ತೋಲೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT