ಜಾಮಾ ಮಸೀದಿ 
ದೇಶ

ಐತಿಹಾಸಿಕ ಜಾಮಾ ಮಸೀದಿಯ 'ಮಹಿಳಾ ವಿರೋಧಿ' ನಡೆ: ಮಹಿಳೆಯರಿಗೆ ಪ್ರವೇಶ ನಿಷೇಧ!

ಐತಿಹಾಸಿಕ ಜಾಮಾ ಮಸೀದಿಗೆ ಒಂಟಿಯಾಗಿ ಹುಡುಗಿಯರು ಮತ್ತು ಮಹಿಳೆಯರು ಬರುವುದನ್ನು ನಿಷೇಧಿಸಲಾಗಿದೆ ಎಂದು ಮಸೀದಿಯ ಹೊರಗೆ ಅಂಟಿಸಲಾಗಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ನವದೆಹಲಿ: ಐತಿಹಾಸಿಕ ಜಾಮಾ ಮಸೀದಿಗೆ ಒಂಟಿಯಾಗಿ ಹುಡುಗಿಯರು ಮತ್ತು ಮಹಿಳೆಯರು ಬರುವುದನ್ನು ನಿಷೇಧಿಸಲಾಗಿದೆ ಎಂದು ಮಸೀದಿಯ ಹೊರಗೆ ಅಂಟಿಸಲಾಗಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಜಾಮಾ ಮಸೀದಿಯ ಪಿಆರ್‌ಒ ಸಬೀವುಲ್ಲಾಖಾನ್ ಮಾತನಾಡಿ, 'ಇಲ್ಲಿಗೆ ಬರುವ ಒಂಟಿ ಹುಡುಗಿಯರನ್ನು ತಡೆಯಲು ಈ ನಿಷೇಧ ಹೇರಲಾಗಿದೆ. ಅವರು ಇಲ್ಲಿಗೆ ಬಂದು ವಿಡಿಯೊ ಮಾಡುತ್ತಿದ್ದಾರೆ. 'ನೀವು ಬರುವುದಾದರೆ ನಿಮ್ಮ ಕುಟುಂಬದೊಂದಿಗೆ ಬನ್ನಿ, ಯಾವುದೇ ನಿರ್ಬಂಧಗಳಿಲ್ಲ. ವಿವಾಹಿತ ದಂಪತಿಗಳು ಬರುತ್ತಾರೆ. ಯಾವುದೇ ನಿರ್ಬಂಧಗಳಿಲ್ಲ. ಆದರೆ ಯಾರಿಗಾದರೂ ಇಲ್ಲಿಗೆ ಬರಲು ಸಮಯ ನೀಡುವುದು. ಅದನ್ನು ಮೀಟಿಂಗ್ ಪಾಯಿಂಟ್ ಎಂದು ಪರಿಗಣಿಸುವುದು. ಪಾರ್ಕ್ ಎಂದು ಪರಿಗಣಿಸುವುದು. ಟಿಕ್‌ಟಾಕ್ ವೀಡಿಯೊಗಳನ್ನು ಮಾಡುವುದು ನೃತ್ಯ ಮಾಡುವುದು. ಇದು ಯಾವುದೇ ಧಾರ್ಮಿಕ ಸ್ಥಳಕ್ಕೂ ಸೂಕ್ತವಲ್ಲ. ಅದು ಮಸೀದಿ, ಮಂದಿರ ಅಥವಾ ಗುರುದ್ವಾರವೇ ಆಗಿರಲಿ ಎಂದು ಹೇಳಿದ್ದಾರೆ.

ಜಾಮಾ ಮಸೀದಿಯ ಎಲ್ಲಾ ಮೂರು ಪ್ರವೇಶ ದ್ವಾರಗಳ ಮೇಲೆ ಸೂಚನಾ ಫಲಕವನ್ನು ಹಾಕಲಾಗಿದ್ದು ಅದರಲ್ಲಿ 'ಜಾಮಾ ಮಸೀದಿಗೆ ಏಕಾಂಗಿ ಹುಡುಗಿಯರು ಅಥವಾ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ' ಎಂದು ಬರೆಯಲಾಗಿತ್ತು. ಇದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು.

ಜಾಮಾ ಮಸೀದಿಗೆ ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಸೀದಿಯ ಇಮಾಮ್‌ಗೆ ನೋಟಿಸ್ ನೀಡಲು ದೆಹಲಿ ಮಹಿಳಾ ಆಯೋಗ ನಿರ್ಧರಿಸಿದೆ. ಈ ಬಗ್ಗೆ ಸ್ವತಃ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲಾ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಸ್ವಾತಿ ಮಲಿವಾಲ್ ಅವರು, 'ಜಾಮಾ ಮಸೀದಿಗೆ ಮಹಿಳೆಯರ ಪ್ರವೇಶವನ್ನು ತಡೆಯುವ ನಿರ್ಧಾರ ಸಂಪೂರ್ಣವಾಗಿ ತಪ್ಪು. ಪುರುಷನಿಗೆ ಪೂಜೆ ಮಾಡುವ ಹಕ್ಕು ಎಷ್ಟು ಇದೆಯೋ ಅಷ್ಟೇ ಹಕ್ಕು ಮಹಿಳೆಗೂ ಇದೆ. ನಾನು ಜಾಮಾ ಮಸೀದಿಯ ಇಮಾಮ್‌ಗೆ ನೋಟಿಸ್ ನೀಡುತ್ತಿದ್ದೇನೆ. ಈ ರೀತಿ ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ಟ್ವೀಟಿಸಿದ್ದಾರೆ.

ಶಾಹಿ ಇಮಾಮ್ ಏನು ಹೇಳುತ್ತಾರೆ?
ಮಾಧ್ಯಮ ವರದಿಗಳ ಪ್ರಕಾರ, ಹುಡುಗಿಯರು ತಮ್ಮ ಗೆಳೆಯರೊಂದಿಗೆ ಮಸೀದಿಗೆ ಬರುತ್ತಾರೆ ಎಂಬ ದೂರುಗಳು ಬರುತ್ತಿವೆ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಹೇಳುತ್ತಾರೆ. ಈ ಕಾರಣಕ್ಕಾಗಿ ಅಂತಹ ಹುಡುಗಿಯರು ಒಂಟಿಯಾಗಿ ಬರುವುದಕ್ಕೆ ನಿರ್ಬಂಧ ಹೇರಲಾಗಿದೆ. ಮಹಿಳೆಯೊಬ್ಬರು ಜಾಮಾ ಮಸೀದಿಗೆ ಬರಲು ಬಯಸಿದರೆ. ಆಕೆ ತನ್ನ ಕುಟುಂಬ ಅಥವಾ ಪತಿಯೊಂದಿಗೆ ಬರಬೇಕು ಎಂದು ಶಾಹಿ ಇಮಾಮ್ ಹೇಳಿದ್ದಾರೆ. ನಮಾಜ್ ಮಾಡಲು ಬರುವ ಮಹಿಳೆಯನ್ನು ತಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT