ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವೈದ್ಯರ ಅನುಪಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ರೋಗಿಗೆ ಇಂಜೆಕ್ಷನ್ ಚುಚ್ಚಿದ ಆ್ಯಂಬುಲೆನ್ಸ್ ಚಾಲಕ; ತನಿಖೆಗೆ ಆದೇಶ

ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ  ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಬಲ್ಲಿಯಾ: ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ  ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿರುವ ರೋಗಿಗೆ ಆಂಬ್ಯುಲೆನ್ಸ್ ಚಾಲಕರೊಬ್ಬರು ಇಂಜೆಕ್ಷನ್ ನೀಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ್ದಾರೆ.  ಈ ವಿಡಿಯೋ ಗುರುವಾರ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ದಿವಾಕರ್ ಸಿಂಗ್ ಹೇಳಿದ್ದಾರೆ.

ವಿಡಿಯೋದಲ್ಲಿ ಆಂಬ್ಯುಲೆನ್ಸ್ ಚಾಲಕ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಕೊಠಡಿಯಲ್ಲಿ ರೋಗಿಗೆ ಇಂಜೆಕ್ಷನ್ ನೀಡುತ್ತಿರುವುದನ್ನು ಕಾಣಬಹುದು. ಮೂಲಗಳ ಪ್ರಕಾರ ಈ ಘಟನೆ ಬುಧವಾರ ರಾತ್ರಿ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ವಿಷಯದ ಕುರಿತು ಅರಿತ ಅಧಿಕಾರಿಗಳು ತುರ್ತು ಚಿಕಿತ್ಸಾ ಕೊಠಡಿಯ ಪ್ರಭಾರಿ ವೈದ್ಯಾಧಿಕಾರಿ, ವೈದ್ಯರು ಮತ್ತು ಅಲ್ಲಿ ನಿಯೋಜಿಸಲಾದ ಇತರ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಅವರ ತಕ್ಷಣದ ಸ್ಪಷ್ಟೀಕರಣವನ್ನು ಕೋರಿ ನೋಟಿಸ್‌ ನೀಡಿದ್ದಾರೆ. 

ಅಂತೆಯೇ ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT