ಸಚಿನ್ ಪೈಲಟ್, ಕೆ. ಸಿ. ವೇಣುಗೋಪಾಲ್, ಅಶೋಕ್ ಗೆಹ್ಲೋಟ್ 
ದೇಶ

ರಾಜಸ್ಥಾನ ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ

ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಗದ್ದರ್ (ದೇಶದ್ರೋಹಿ) ಎಂದು ಮುಖ್ಯಮಂತ್ರಿ ಅಶೋಕ್  ಗೆಹ್ಲೋಟ್ ಕರೆದ ನಂತರ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ತಲೆದೋರಿರುವಂತೆಯೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ನವೆಂಬರ್ 29 ರಂದು ರಾಜಸ್ಥಾನಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ.

ನವದೆಹಲಿ: ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಗದ್ದರ್ (ದೇಶದ್ರೋಹಿ) ಎಂದು ಮುಖ್ಯಮಂತ್ರಿ ಅಶೋಕ್  ಗೆಹ್ಲೋಟ್ ಕರೆದ ನಂತರ ರಾಜಸ್ಥಾನ ಕಾಂಗ್ರೆಸ್ ನಲ್ಲಿ ಭಿನ್ನಮತ ತಲೆದೋರಿರುವಂತೆಯೇ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ನವೆಂಬರ್ 29 ರಂದು ರಾಜಸ್ಥಾನಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ.

ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯವನ್ನು ಪ್ರವೇಶಿಸುವ ಭಾರತ್ ಜೋಡೋ ಯಾತ್ರೆಯ ವ್ಯವಸ್ಥೆಯನ್ನು ವೇಣುಗೋಪಾಲ್ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ಯಾತ್ರೆಯ ಸಮಯದಲ್ಲಿ ರಾಜ್ಯ ಘಟಕದಲ್ಲಿನ ಕಿತ್ತಾಟ ಮುನ್ನೆಲೆಗೆ ಬರದಂತೆ ನೋಡಿಕೊಳ್ಳಲು ವೇಣುಗೋಪಾಲ್ ಭೇಟಿಯ ಉದ್ದೇಶವಾಗಿದೆ ಎಂದು ಪಕ್ಷದ ಒಳಗಿನವರು ಹೇಳಿದ್ದಾರೆ. 

ಗೆಹ್ಲೋಟ್ ಮತ್ತು ಪೈಲಟ್ ನಾಯಕತ್ವದ ಸ್ಥಾನದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ, ಗೆಹ್ಲೋಟ್ ಅವರನ್ನು ಬದಲಿಸಲು  ಪೈಲಟ್ ಪ್ರಯತ್ನಿಸುತ್ತಿದ್ದಾರೆ ಮತ್ತು ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಸೂಚನೆಯಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಬಣಗಳಾಗಿ ಒಡೆದು ಹೋಗಿರುವ ಶಾಸಕರು ಮತ್ತು ಪಕ್ಷದ ನಾಯಕರ ಕೋಪವನ್ನು ತಣ್ಣಗಾಗಿಸುವಲ್ಲಿ ವೇಣುಗೋಪಾಲ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!