ಸಚಿನ್ ಪೈಲಟ್ 
ದೇಶ

ಸಚಿನ್ ಪೈಲಟ್ ಅಗತ್ಯ ನಮಗಿಲ್ಲ, ಅವರು ನಮಗೆ ಬೇಡ: ಅಶೋಕ್‌ ಗೆಹ್ಲೋಟ್ 10 ಕೋಟಿ ರು. ಹಣ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ

ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಸೇರಿದಂತೆ ಬಂಡಾಯ ಶಾಸಕರಿಗೆ ಬಿಜೆಪಿ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂಬ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಅವರ ಹೇಳಿಕೆ ನಿರಾಧಾರ ಎಂದು ರಾಜಸ್ಥಾನ ಬಿಜೆಪಿ ಪ್ರತಿಕ್ರಿಯಿಸಿದೆ.

ಜೈಪುರ: ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಸೇರಿದಂತೆ ಬಂಡಾಯ ಶಾಸಕರಿಗೆ ಬಿಜೆಪಿ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂಬ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಅವರ ಹೇಳಿಕೆ ನಿರಾಧಾರ ಎಂದು ರಾಜಸ್ಥಾನ ಬಿಜೆಪಿ ಪ್ರತಿಕ್ರಿಯಿಸಿದೆ.

2020ರಲ್ಲಿ ಸಚಿನ್‌ ಪೈಲಟ್‌ ನೇತೃತ್ವದ ಕಾಂಗ್ರೆಸ್‌ ಶಾಸಕರ ಗುಂಪು ಪಕ್ಷದ ವಿರುದ್ಧ ಬಂಡಾಯವೆದ್ದು ಗುರುಗ್ರಾಮದ ರೆಸಾರ್ಟ್‌ನಲ್ಲಿ ಸುಮಾರು ಒಂದು ತಿಂಗಳಿಗೂ ಹೆಚ್ಚು ದಿನ ಉಳಿದುಕೊಂಡಿದ್ದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿಯ ಹಿರಿಯ ನಾಯಕರು ಇದ್ದರು ಎಂದು ಗೆಹ್ಲೋಟ್ ಆರೋಪಿಸಿದ್ದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಬಂಡಾಯ ಶಾಸಕರ ಮನೆಗೆ ನಿರಂತರವಾಗಿ ಭೇಟಿ ನೀಡಿದ್ದಾರೆ. ಪೈಲಟ್‌ ಸೇರಿದಂತೆ ಪ್ರತಿಯೊಬ್ಬ ಬಂಡಾಯ ಶಾಸಕನಿಗೂ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂದು ಗೆಹ್ಲೋಟ್ ಹೇಳಿದ್ದರು. ಈ ಆರೋಪವನ್ನು ಅಲ್ಲಗಳೆದಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್‌ ಪೂನಿಯಾ, ಇದು ಆಧಾರರಹಿತ ಆರೋಪ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳಿಗೆ ಹಾಗೂ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ. ಗೆಹ್ಲೋಟ್ ಅವರು ಕಳೆದ ನಾಲ್ಕು ವರ್ಷಗಳಿಂದ ಈ ಆರೋಪವನ್ನು ಮಾಡುತ್ತಲೇ ಬಂದಿದ್ದಾರೆ. ಇದಕ್ಕೆ ಯಾವುದೇ ಆಧಾರವಿಲ್ಲ.  ನಮಗೆ ಸಚಿನ್ ಪೈಲಟ್ ಬೇಡ, ಈ ಪ್ರಸಂಗಗಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಪೂನಿಯಾ ತಿಳಿಸಿದ್ದಾರೆ.

ಸಚಿನ್ ಪೈಲಟ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಇದು ಕಾಂಗ್ರೆಸ್‌ನ ಆಂತರಿಕ ಕಲಹ. ನಡೆಯುತ್ತಿರುವ ಜಗಳಕ್ಕೆ ನಾವು ಹೇಗೆ ಹೊಣೆಗಾರರು? ಗೆಹ್ಲೋಟ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಾವು ಪೈಲಟ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ. ನಮಗೆ ಹಿಂದೆಯೂ ಪೈಲಟ್ ಅಗತ್ಯವಿರಲಿಲ್ಲ ಮತ್ತು ಈಗಲೂ ನಮಗೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT