ಬಿಜೆಪಿ ಪ್ರಣಾಳಿಕೆ ಬಿಡುಗಡೆ 
ದೇಶ

ಗುಜರಾತ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿ ಹಲವು ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಬಿಜೆಪಿ ‘ಸಂಕಲ್ಪ ಪತ್ರ’ ಎಂಬ ಹೆಸರಿನ ಪ್ರಣಾಳಿಕೆಯನ್ನು ಗಾಂಧಿನಗರದಲ್ಲಿರುವ “ಶ್ರೀ ಕಮಲಂ” ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಗುಜರಾತ್ ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಉಪಸ್ಥಿತರಿದ್ದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮೊದಲ ಬಾರಿಗೆ ಸಮಾಜ ವಿರೋಧಿ ನಿಗ್ರಹ ದಳ (ಆ್ಯಂಟಿ ರಾಡಿಕಲೈಸೇಶನ್ ಸೆಲ್) ಸ್ಥಾಪಿಸುವುದಾಗಿ ಭರವಸೆ ನೀಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜೆಪಿ ನಡ್ಡಾ, "ಸಂಭಾವ್ಯ ಬೆದರಿಕೆಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು, ಭಾರತ ವಿರೋಧಿ ಶಕ್ತಿಗಳ ಸ್ಲೀಪರ್ ಸೆಲ್‌ಗಳನ್ನು ಗುರುತಿಸಲು ಮತ್ತು ತೊಡೆದುಹಾಕಲು ನಾವು ಆಂಟಿ-ರ್ಯಾಡಿಕಲೈಸೇಶನ್ ಸೆಲ್ ಅನ್ನು ರಚಿಸುತ್ತೇವೆ ಎಂದು ಹೇಳಿದರು.

ಹೋರಾಟದ ಹೆಸರಿನಲ್ಲಿ ಸಾಮಾಜ ವಿರೋಧಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿ ಮಾಡಿದರೆ ಗಲಭೆಕೋರರಿಂದಲೇ ದಂಡ ವಸೂಲಿ ಮಾಡಲು ಗುಜರಾತ್ ವಸೂಲಾತಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ. ಈ ಮೂಲಕ ಗಲಭೆಗಳು, ಹಿಂಸಾತ್ಮಕ ಪ್ರತಿಭಟನೆಗಳು, ಅಶಾಂತಿಯನ್ನು ತಡೆಯಲಾಗುವುದು ಎಂದು ನಡ್ಡಾ ತಿಳಿಸಿದರು.

ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುತ್ತೇವೆ. ಗುಜರಾತ್ ಏಕರೂಪ ನಾಗರಿಕ ಸಂಹಿತೆ ಸಮಿತಿಯ ಶಿಫಾರಸನ್ನು ಸಂಪೂರ್ಣ ಅನುಷ್ಠಾನಗೊಳಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT