ಗೋಪಾಲ್ ರೈ 
ದೇಶ

ಬಿಜೆಪಿ ಸೋಲಿಸಲು ಜನರು ಉತ್ಸುಕರಾಗಿದ್ದಾರೆ, ಎಎಪಿ 230 ಸ್ಥಾನ ಗೆಲ್ಲುತ್ತದೆ: ಗೋಪಾಲ್ ರೈ

ದೆಹಲಿ ಮಹಾನಗರ ಪಾಲಿಕೆಯಿಂದ ಬಿಜೆಪಿಯನ್ನು ಕಿತ್ತೊಗೆಯಲು ಜನರು ಬಯಸಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಕನಿಷ್ಠ 230 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಭಿವೃದ್ಧಿ ಮತ್ತು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಿಂದ ಬಿಜೆಪಿಯನ್ನು ಕಿತ್ತೊಗೆಯಲು ಜನರು ಬಯಸಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಕನಿಷ್ಠ 230 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಭಿವೃದ್ಧಿ ಮತ್ತು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಮುಂಬರುವ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಎಎಪಿ ಪ್ರಚಾರವನ್ನು ಮುನ್ನಡೆಸುತ್ತಿರುವ  ಗೋಪಾಲ್ ರೈ, ಕಳೆದ 15 ವರ್ಷಗಳಲ್ಲಿ ಬಿಜೆಪಿ ಆಡಳಿತದ ನಾಗರಿಕ ಸಂಸ್ಥೆಗಳು ಅವ್ಯವಸ್ಥೆಯನ್ನು ಸೃಷ್ಟಿಸಿರುವುದರಿಂದ ಜನರು ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ಬೇಸತ್ತಿದ್ದಾರೆ ಎಂದು ಹೇಳಿದರು.

ಕಸದ ಬಿಕ್ಕಟ್ಟು, ಪಾರ್ಕಿಂಗ್ ಅವ್ಯವಸ್ಥೆ, ಮಕ್ಕಳ ಮೂಲ ಶಿಕ್ಷಣ ಸುಧಾರಣೆ, ಪ್ರಾಥಮಿಕ ಶಾಲೆಗಳ ಪ್ರಾರಂಭ, ಪ್ರಾಥಮಿಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು, ಡೆಂಗ್ಯೂ ತಡೆಗಟ್ಟುವಿಕೆ ಮುಂತಾದ ಸಮಸ್ಯೆಗಳನ್ನು ಪರಿಹರಿಸುವ ಯಾವುದೇ ಕೆಲಸ ಬಿಜೆಪಿ ಅವಧಿಯಲ್ಲಿ ನಡೆದಿಲ್ಲ ಎಂದು ರೈ ಹೇಳಿದರು.

"ಜನರು ದುರಾಡಳಿತದ ಬಗ್ಗೆ ತಿಳಿದಿದ್ದಾರೆ ಮತ್ತು ಅವರನ್ನು (ಬಿಜೆಪಿ) ಹೊರಹಾಕುತ್ತಾರೆ" ಎಂದು ಎಎಪಿಯ ದೆಹಲಿ ಘಟಕದ ಸಂಚಾಲಕರೂ ಆಗಿರುವ ರೈ ತಿಳಿಸಿದ್ದಾರೆ.

ಟಿಕೆಟ್ ಹಂಚಿಕೆ ವಿವಾದದ ಕುರಿತು, ಪಕ್ಷವು ಪ್ರತಿ ವಾರ್ಡ್‌ನಿಂದ 11 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ, ಅದರಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದೆ, ಇದರಿಂದ ಇತರರು ಸ್ವಲ್ಪ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

"ನಾವು ಸರಿಯಾದ ಸಮೀಕ್ಷೆಯ ನಂತರ ಟಿಕೆಟ್ ಗಳನ್ನು ನೀಡಿದ್ದೇವೆ ಮತ್ತು ಟಿಕೆಟ್ ಗಳಳನ್ನು ಮಾರಾಟ ಮಾಡುವ ಮತ್ತು ಖರೀದಿಸುವ ಎಲ್ಲಾ ವದಂತಿಗಳು ಎಎಪಿಯ ಇಮೇಜ್ ಅನ್ನು ಹಾಳುಮಾಡುವ ಕ್ರಮವಾಗಿದೆ" ಎಂದು ಅವರು ಹೇಳಿದರು. "ಬಿಜೆಪಿಗೆ ಮೂರು ಅವಕಾಶಗಳನ್ನು ನೀಡಿದ ನಂತರ ಎಂಸಿಡಿಯಲ್ಲಿ ನಮಗೆ ಒಂದು ಅವಕಾಶ ನೀಡುವಂತೆ ನಾವು ಅವರನ್ನು ಕೇಳುತ್ತಿದ್ದೇವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT