ಪ್ರಾತಿನಿಧಿಕ ಚಿತ್ರ 
ದೇಶ

ತೆಲಂಗಾಣ: ವಿದೇಶದಿಂದ ತಂದಿದ್ದ ಚಾಕೊಲೇಟ್ ತಿನ್ನುವಾಗ ಉಸಿರುಗಟ್ಟಿ 8 ವರ್ಷದ ಮಗು ಸಾವು

ತೆಲಂಗಾಣದ ವಾರಂಗಲ್ ಪಟ್ಟಣದಲ್ಲಿ ಎಂಟು ವರ್ಷದ ಬಾಲಕ ತನ್ನ ತಂದೆ ವಿದೇಶದಿಂದ ತಂದಿದ್ದ ಚಾಕೊಲೇಟ್‌ ಸೇವಿಸುವ ವೇಳೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆಸಿದೆ.

ಹೈದರಾಬಾದ್: ತೆಲಂಗಾಣದ ವಾರಂಗಲ್ ಪಟ್ಟಣದಲ್ಲಿ ಎಂಟು ವರ್ಷದ ಬಾಲಕ ತನ್ನ ತಂದೆ ವಿದೇಶದಿಂದ ತಂದಿದ್ದ ಚಾಕೊಲೇಟ್‌ ಸೇವಿಸುವ ವೇಳೆ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆಸಿದೆ.

ಸಂದೀಪ್ ಸಿಂಗ್ ಎಂಬ ಬಾಲಕನ ಗಂಟಲಿಗೆ ಚಾಕೊಲೇಟ್ ಸಿಕ್ಕಿಹಾಕಿಕೊಂಡಿದೆ. ಕೂಡಲೇ ಆತನನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ.

ಪೊಲೀಸರ ಪ್ರಕಾರ, ಪಟ್ಟಣದಲ್ಲಿ ಎಲೆಕ್ಟ್ರಿಕಲ್ ಅಂಗಡಿಯನ್ನು ನಡೆಸುತ್ತಿರುವ ಕಂಗಾನ್ ಸಿಂಗ್ ಅವರ ಕುಟುಂಬದಲ್ಲಿ ದುರಂತ ಸಂಭವಿಸಿದೆ. ರಾಜಸ್ಥಾನ ಮೂಲದ ಕಂಗಾನ್ ಸಿಂಗ್ ಸುಮಾರು 20 ವರ್ಷಗಳ ಹಿಂದೆ ವಾರಂಗಲ್‌ಗೆ ವಲಸೆ ಬಂದಿದ್ದು, ಕುಟುಂಬ ಮತ್ತು ನಾಲ್ವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು.

ಆಸ್ಟ್ರೇಲಿಯಾ ಪ್ರವಾಸದಿಂದ ವಾಪಸಾಗುವಾಗ ಕಂಗಾನ್ ಸಿಂಗ್ ತಮ್ಮ ಮಕ್ಕಳಿಗೆ ಚಾಕೊಲೇಟ್ ತಂದಿದ್ದರು. ಸಂದೀಪ್ ಶನಿವಾರ ತನ್ನ ಶಾಲೆಗೆ ಕೆಲವು ಚಾಕೊಲೇಟ್‌ಗಳನ್ನು ತೆಗೆದುಕೊಂಡು ಹೋಗಿದ್ದ. ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದ ಸಂದೀಪ್ ಬಾಯಿಗೆ ಚಾಕೊಲೇಟ್‌ ಹಾಕಿಕೊಂಡಿದ್ದಾನೆ. ಆದರೆ, ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಬಳಿಕ ಆತ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ ಮತ್ತು ಉಸಿರುಗಟ್ಟುತ್ತಿದ್ದ. ಈ ವೇಳೆ ಶಾಲೆಯ ಅಧಿಕಾರಿಗಳು ಸಂದೀಪ್‌ನನ್ನು ಸರ್ಕಾರಿ ಎಂಜಿಹೆಚ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಆದರೆ, ಸಂದೀಪ್‌ನನ್ನು ರಕ್ಷಿಸಲು ವೈದ್ಯರು ಪ್ರಯತ್ನಿಸಿದರೂ, ಆತ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT