ಸತ್ಯೇಂದ್ರ ಜೈನ್ ಕೊಠಡಿ ಕ್ಲೀನಿಂಗ್ 
ದೇಶ

ಜೈಲಿನೊಳಗೆ ಮಸಾಜ್, ಅದ್ದೂರಿ ಊಟದ ಬಳಿಕ ಸತ್ಯೇಂದ್ರ ಜೈನ್ ಸೆಲ್‌ನಲ್ಲಿ ಕ್ಲೀನಿಂಗ್ ಸೇವೆ: ವಿಡಿಯೋ ವೈರಲ್

ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯೊಳಗೆ ಮಸಾಜ್ ಮಾಡಿಸಿಕೊಳ್ಳುವ ಮತ್ತು ರುಚಿಕರವಾದ ಊಟ ಮಾಡುತ್ತಿರುವ ವೀಡಿಯೊಗಳು ಬಿಡುಗಡೆಯಾದ ಕೆಲವೇ ದಿನಗಳ ಬಳಿಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು, ಸೆಲ್‌ನಲ್ಲಿ ಕ್ಲೀನಿಂಗ್ ಸೇವೆಯ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಕೊಠಡಿಯೊಳಗೆ ಮಸಾಜ್ ಮಾಡಿಸಿಕೊಳ್ಳುವ ಮತ್ತು ರುಚಿಕರವಾದ ಊಟ ಮಾಡುತ್ತಿರುವ ವೀಡಿಯೊಗಳು ಬಿಡುಗಡೆಯಾದ ಕೆಲವೇ ದಿನಗಳ ಬಳಿಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು, ಸೆಲ್‌ನಲ್ಲಿ ಕ್ಲೀನಿಂಗ್ ಸೇವೆಯ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬಿಜೆಪಿ ಈ ಹೊಸ ವಿಡಿಯೋ ಬಿಡುಗಡೆ ಮಾಡಿದ್ದು, ಈ ನೂತನ ವಿಡಿಯೋದಲ್ಲಿ ಸತ್ಯೇಂದ್ರ ಜೈನ್ ಅವರ ಜೈಲು ಕೊಠಡಿಯನ್ನು ಕೆಲವರು ಶುಚಿಗೊಳಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ, 8-10 ಜನರು "ಸತ್ಯೇಂದ್ರ ಜೈನ್‌ಗೆ ಮನೆಗೆಲಸ ಮತ್ತು ವಿವಿಐಪಿ ಸೇವೆಗಳನ್ನು" ಒದಗಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಈ ಕುರಿತು ಟ್ವೀಟ್ ಮಾಡಿದ್ದು, "ತಿಹಾರ್‌ನ ಎಎಪಿ ಕಾ ದರ್ಬಾರ್ ನಂತರ ಈಗ ತಿಹಾರ್‌ನಲ್ಲಿ ರೂಮ್ ಸೇವೆ! 8-10 ಜನರು ಸತ್ಯೇಂದ್ರ ಜೈನ್‌ಗೆ ಟಿವಿ, ಮಿನರಲ್ ವಾಟರ್, ಮನೆಗೆಲಸ ಮತ್ತು ವಿವಿಐಪಿ ಸೇವೆಗಳನ್ನು ಒದಗಿಸುತ್ತಿದ್ದಾರೆ. ಹಣ್ಣುಗಳು, ಡ್ರೈ ಫ್ರೂಟ್ ಗಳು, ನವಾಬಿ ಊಟ, ಜೈಲು ಅಧೀಕ್ಷಕರ ವೈಯಕ್ತಿಕ ಭೇಟಿ! ಏನು ನಡೆಯುತ್ತಿದೆ?" ಎಂದು ಪ್ರಶ್ನೆ ಮಾಡಿದ್ದಾರೆ.

ಈ ಹಿಂದೆ, ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಂಡು ಅದ್ದೂರಿ ಊಟ ಮಾಡಿದ ಹಳೆಯ ವಿಡಿಯೋಗಳನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಅಲ್ಲದೆ ಜೈನ್ ಗೆ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿತ್ತು. ಈ ಸಂಬಂಧ ಜೈಲು ಅಧಿಕಾರಿಗಳನ್ನೂ ಕೂಡ ಅಮಾನತು ಮಾಡಲಾಗಿತ್ತು. ಆದಾಗ್ಯೂ ಜೈಲಿನಲ್ಲಿ ಜೈನ್ ರಿಗೆ ನೀಡಲಾಗುತ್ತಿರುವ ವಿಐಪಿ ಸೇವೆಗಳು ಮುಂದುವರೆದಿರುವುದು ಈ ನೂತನ ವಿಡಿಯೋದಿಂದ ಸ್ಪಷ್ಟವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಸತ್ಯೇಂದ್ರ ಜೈನ್ ಅವರ ಸೆಲ್‌ನೊಳಗೆ ಹಲವಾರು ಜನರನ್ನು ತೋರಿಸಿದೆ ಮತ್ತೊಂದು ವೀಡಿಯೊ. ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಭೇಟಿ ಮಾಡುವುದನ್ನು ಸಹ ಕಾಣಬಹುದು.
ಜೈಲಿನಲ್ಲಿ ವಿಶೇಷ ಆಹಾರಕ್ಕೆ ಪ್ರವೇಶ ಕೋರಿ ಸತ್ಯೇಂದ್ರ ಜೈನ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದ ಒಂದು ದಿನದ ನಂತರ ಹೊಸ ವಿಡಿಯೋ ಹೊರಬಿದ್ದಿದೆ. 

ಜೈನ್ ತಮ್ಮ ಮನವಿಯಲ್ಲಿ ತನಗೆ 'ಜೈನ ಆಹಾರ' ಮತ್ತು ದೇವಾಲಯಕ್ಕೆ ಪ್ರವೇಶವನ್ನು ನೀಡಿಲ್ಲ ಎಂದು ಹೇಳಿದ್ದರು, ತಾನು ದೇವಾಲಯಕ್ಕೆ ಹೋಗದೆ ನಿಯಮಿತ ಆಹಾರವನ್ನು ಸೇವಿಸುವುದಿಲ್ಲ ಮತ್ತು ಹಣ್ಣುಗಳು ಮತ್ತು ಸಲಾಡ್‌ಗಳ 'ಧಾರ್ಮಿಕ' ಆಹಾರದಲ್ಲಿದ್ದೇನೆ ಎಂದು ಹೇಳಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT