ಪ್ರಧಾನಿ ನರೇಂದ್ರ ಮೋದಿ 
ದೇಶ

ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆ

ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್,  ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ರಾಜ್ ಕೋಟ್: ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್,  ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತೆ ಬರುತ್ತಿದ್ದು, ಬೃಹತ್ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಲ್ಲಿದ್ದೇವೆ ಎಂದು ರಾಜ್ ಕೋಟ್ ಬಿಜೆಪಿ ಅಧ್ಯಕ್ಷ ಕಮಲೇಶ್ ಮಿರಾನಿ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಮೋದಿ ಅವರನ್ನು ನೋಡಲು ಮತ್ತು ಅವರ ಮಾತನ್ನು ಜನರು ಇಷ್ಟಪಡಲಿದ್ದು, ರಾಜಕೋಟ್ ನ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು. 

ಮೋದಿ ಅವರು ಮೊದಲ ಬಾರಿಗೆ ರಾಜ್ ಕೋಟ್ ನಿಂದ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಅವರಿಗೆ ಆ ಕ್ಷೇತ್ರದ ಬಗ್ಗೆ ಅತ್ಯಂತ ಮೃಧು ಧೋರಣೆ ಇರುವುದರ ಜೊತೆಗೆ ಈ ಕ್ಷೇತ್ರಕ್ಕಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇಲ್ಲಿನ ಸಾರ್ವಜನಿಕ ಸಮಾವೇಶ ಯಶಸ್ವಿಯಾಗುವ ವಿಶ್ವಾಸ ಹೊಂದಿದ್ದು, ರಾಜ್ ಕೋಟ್ ನೆಲದಿಂದ ಭಾರತೀಯ ಜನತಾ ಪಕ್ಷ ಮತ್ತೆ ಗೆಲ್ಲಲಿದೆ ಎಂದರು. ನಾಳೆ ಸಂಜೆ 6 ಗಂಟೆಗೆ ಮೋದಿ ರಾಜಕೋಟ್ ಗೆ ಬರಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು. 

ಈ ಹಿಂದೆ ಅಕ್ಟೋಬರ್ ತಿಂಗಳಲ್ಲಿ ರಾಜ್ ಕೋಟ್ ನಲ್ಲಿ 4,309 ಕೋಟಿ ಮತ್ತು ಮೋರ್ಬಿ ಜಿಲ್ಲೆಯಲ್ಲಿ ರೂ. 2,738 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದ್ದರು.  ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT