ಪ್ರಧಾನಿ ಮೋದಿ 
ದೇಶ

ಭಯೋತ್ಪಾದನೆ ಟಾರ್ಗೆಟ್ ಮಾಡಿ ಅಂದ್ರೆ ಅವರು ನನ್ನನ್ನು ಟಾರ್ಗೆಟ್ ಮಾಡಿದ್ರು: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಗುಜರಾತ್ ನ ವಿಧಾನಸಭಾ ಚುನಾವಣೆಗೆ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಅಹ್ಮದಾಬಾದ್: ಗುಜರಾತ್ ನ ವಿಧಾನಸಭಾ ಚುನಾವಣೆಗೆ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಕಾಂಗ್ರೆಸ್ ವಿರುದ್ಧ ಭಯೋತ್ಪಾದನೆಗೆ ಕವಚವಾಗಿರುವ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ಭಯೋತ್ಪಾದನೆಯ ಬೇಗೆಯಲ್ಲಿ ಹಲವು ವರ್ಷಗಳ ಕಾಲ ಬೆಂದಿತ್ತು. ಗುಜರಾತ್ ನಲ್ಲಿದ್ದ ಬಿಜೆಪಿ ಸರ್ಕಾರ ಭಯೋತ್ಪಾದಕರ ಸ್ಲೀಪರ್ ಸೆಲ್ ಗಳನ್ನು ನಿಗ್ರಹಿಸುವ ಮೂಲಕ ಉಗ್ರವಾದವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದರೆ,  ಈ ಹಿಂದೆ ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರ ಭಯೋತ್ಪಾದಕರನ್ನು ಬಿಡುಗಡೆ ಮಾಡುವ ಕೆಲಸ ಮಾಡುತ್ತಿತ್ತು ಎಂದು ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿ ಹಲವು ಭರವಸೆ
 
"ನಾವು ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದು ಕೇಳಿಕೊಂಡರೆ, ಅವರು ಮೋದಿಯನ್ನು ಟಾರ್ಗೆಟ್ ಮಾಡುತ್ತಿದ್ದರು ಪರಿಣಾಮ ಭಯೋತ್ಪಾದಕರಿಗೆ ಭಯವೇ ಇಲ್ಲದಂತಾಯಿತು, ಭಯೋತ್ಪಾದನೆ ಹೆಚ್ಚಾಗಿ ಈಗ ದೊಡ್ಡ ನಗರಗಳಿಗೂ ವ್ಯಾಪಿಸಿದೆ ಎಂದು ಮೋದಿ ಸಾರ್ವಜನಿಕ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಇದೇ ವೇಳೆ ಬಾಟ್ಲಾ ಎನ್ ಕೌಂಟರ್ ಪ್ರಕರಣವನ್ನೂ ಉಲ್ಲೇಖಿಸಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರು ಭಯೋತ್ಪಾದಕರಿಗಾಗಿ ಕಣ್ಣೀರಿಟ್ಟಿದ್ದರು ಎಂದು ಸೋನಿಯಾ ಗಾಂಧಿ ಹೆಸರು ಉಲ್ಲೇಖಿಸದೇ ತಿವಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT