ಬಿಹಾರ್ ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ ಉಪಚುನಾವಣೆ: ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಬಿಜೆಪಿ-ಜೆಡಿಯು ನೇರ ಹಣಾಹಣಿ

ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಉಪಚುನಾವಣೆ ಎದುರಾಗಿದೆ. ಕುರ್ಹಾನಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ-ಜೆಡಿಯು ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಪಾಟ್ನ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಉಪಚುನಾವಣೆ ಎದುರಾಗಿದೆ. ಕುರ್ಹಾನಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ-ಜೆಡಿಯು ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಡಿ.05 ಕ್ಕೆ ಉಪಚುನಾವಣೆ ನಿಗದಿಯಾಗಿದ್ದು, 2020 ರಲ್ಲಿ ಆರ್ ಜೆಡಿ ಟಿಕೆಟ್ ನಿಂದ ಗೆದ್ದಿದ್ದ ಹಾಲಿ ಶಾಸಕ  ಅನಿಲ್ ಸಹಾನಿ ಅವರ ಅನರ್ಹತೆಯಿಂದಾಗಿ ಈ ಉಪಚುನಾವಣೆ ನಡೆಯುತ್ತಿದೆ.

ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಆರ್ ಜೆಡಿ ಜೆಡಿಯುವನ್ನು ಬೆಂಬಲಿಸಲು ತೀರ್ಮಾನಿಸಿದೆ. 

ಉಪಚುನಾವಣೆಗೆ 13 ಅಭ್ಯರ್ಥಿಗಳು ಸ್ಪರ್ಧಿಸಿದ್ದರೂ ನೇರವಾಗಿ ಜೆಡಿಯು ಹಾಗೂ ಬಿಜೆಪಿ ನಾಯಕ ಕೇದಾರ್ ಪ್ರಸಾದ್ ಗುಪ್ತ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳು ತಮಗೆ 3.12 ಲಕ್ಷ ಮಂದಿಯ ಬೆಂಬಲವಿದೆ ಎಂದು ಹೇಳಿವೆ.

ಡಿ.08 ರಂದು ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT