ಬಿಹಾರ್ ಸಿಎಂ ನಿತೀಶ್ ಕುಮಾರ್ 
ದೇಶ

ಬಿಹಾರ ಉಪಚುನಾವಣೆ: ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಬಿಜೆಪಿ-ಜೆಡಿಯು ನೇರ ಹಣಾಹಣಿ

ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಉಪಚುನಾವಣೆ ಎದುರಾಗಿದೆ. ಕುರ್ಹಾನಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ-ಜೆಡಿಯು ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಪಾಟ್ನ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದ ನಂತರ ಮೊದಲ ಬಾರಿಗೆ ಉಪಚುನಾವಣೆ ಎದುರಾಗಿದೆ. ಕುರ್ಹಾನಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ-ಜೆಡಿಯು ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಡಿ.05 ಕ್ಕೆ ಉಪಚುನಾವಣೆ ನಿಗದಿಯಾಗಿದ್ದು, 2020 ರಲ್ಲಿ ಆರ್ ಜೆಡಿ ಟಿಕೆಟ್ ನಿಂದ ಗೆದ್ದಿದ್ದ ಹಾಲಿ ಶಾಸಕ  ಅನಿಲ್ ಸಹಾನಿ ಅವರ ಅನರ್ಹತೆಯಿಂದಾಗಿ ಈ ಉಪಚುನಾವಣೆ ನಡೆಯುತ್ತಿದೆ.

ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಆರ್ ಜೆಡಿ ಜೆಡಿಯುವನ್ನು ಬೆಂಬಲಿಸಲು ತೀರ್ಮಾನಿಸಿದೆ. 

ಉಪಚುನಾವಣೆಗೆ 13 ಅಭ್ಯರ್ಥಿಗಳು ಸ್ಪರ್ಧಿಸಿದ್ದರೂ ನೇರವಾಗಿ ಜೆಡಿಯು ಹಾಗೂ ಬಿಜೆಪಿ ನಾಯಕ ಕೇದಾರ್ ಪ್ರಸಾದ್ ಗುಪ್ತ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳು ತಮಗೆ 3.12 ಲಕ್ಷ ಮಂದಿಯ ಬೆಂಬಲವಿದೆ ಎಂದು ಹೇಳಿವೆ.

ಡಿ.08 ರಂದು ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT