ಜಯನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ 
ದೇಶ

ಗುಜರಾತ್ ಚುನಾವಣೆ: ಬಿಜೆಪಿ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಕಾಂಗ್ರೆಸ್ ಸೇರ್ಪಡೆ

ಈ ತಿಂಗಳ ಆರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಗುಜರಾತ್‌ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಅವರು ಸೋಮವಾರ ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಅಹಮದಾಬಾದ್: ಈ ತಿಂಗಳ ಆರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಗುಜರಾತ್‌ ಮಾಜಿ ಸಚಿವ ಜಯನಾರಾಯಣ ವ್ಯಾಸ್ ಅವರು ಸೋಮವಾರ ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 75 ವರ್ಷದ ವ್ಯಾಸ್ ಅವರನ್ನು ಅಹಮದಾಬಾದ್‌ನಲ್ಲಿ ಪಕ್ಷಕ್ಕೆ ಬರಮಾಡಿಕೊಂಡರು.

ರಾಜಸ್ಥಾನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಕೂಡ ವ್ಯಾಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವ್ಯಾಸ್, ಪಕ್ಷದ ಆಂತರಿಕ ಪ್ರಜಾಪ್ರಭುತ್ವಕ್ಕಾಗಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸಿದರು.

ಜಯನಾರಾಯಣ ಅವರ ಜೊತೆ ಅವರ ಮಗ ಸಮೀರ್ ವ್ಯಾಸ್ ಕೂಡ ಕಾಂಗ್ರೆಸ್ ಸೇರಿದರು.

ನವೆಂಬರ್ 5 ರಂದು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವ್ಯಾಸ್ ಬಿಜೆಪಿಗೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!