ಭಗತ್ ಸಿಂಗ್ ಕೋಶಿಯಾರಿ 
ದೇಶ

ಮಹಾರಾಷ್ಟ್ರ ಗೌರ್ನರ್ ರಾಜೀನಾಮೆ ನೀಡಲು ಸಿದ್ಧ ಎಂದ ರೌತ್; ಹೇಳಿಕೆ ನಿರಾಕರಿಸಿದ ರಾಜಭವನ

ಶಿವಸೇನೆಯ ಉದ್ಧವ್ ಠಾಕ್ರೆಯ ಬಣದೊಂದಿಗೆ ಗುರುತಿಸಿಕೊಂಡಿರುವ ಸಂಜಯ್ ರೌತ್, ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯಿಂದ ನಿರ್ಗಮಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆಯ ಬಣದೊಂದಿಗೆ ಗುರುತಿಸಿಕೊಂಡಿರುವ ಸಂಜಯ್ ರೌತ್, ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಯಿಂದ ನಿರ್ಗಮಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಕ್ಕಾಗಿ ಶಿವಸೇನೆ (ಯುಬಿಟಿ) ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿತ್ತು ಈ ಬಳಿಕ ರೌತ್ ಮಾತನಾಡಿ, ರಾಜ್ಯಪಾಲರು ಹುದ್ದೆ ಬಿಡುವುದಕ್ಕೆ ನಿರ್ಧರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಛತ್ರಪತಿ ಶಿವಾಜಿ ಮಹಾರಾಜರನ್ನು ಹಿಂದಿನ ಕಾಲದ ಐಕಾನ್ ಎಂದು ಹೇಳಿದ್ದರು. ಇದನ್ನೇ ಶಿವಾಜಿ ಮಹಾರಾಜರಿಗೆ ಮಾಡಿದ ಅವಮಾನ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ ಅವರನ್ನು ಪದವಿಯಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿತ್ತು. 

ಈ ಬಗ್ಗೆ ಮಾತನಾಡಿರುವ ರೌತ್, ರಾಜ್ಯಪಾಲರು ತಮ್ಮ ಹುದ್ದೆಯನ್ನು ಬಿಡುವ ಇಂಗಿತ ಹೊಂದಿದ್ದಾರೆ. ಇದು ಮಹಾರಾಷ್ಟ್ರ ವ್ಯಾಪಿ ಉದ್ಧವ್ ಠಾಕ್ರೆ ಬಣ ಕರೆ ನೀಡಿದ್ದರ ಪರಿಣಾಮ" ಎಂದು ಹೇಳಿದ್ದರು. 

ಅಷ್ಟೇ ಅಲ್ಲದೇ ಮಹಾರಾಷ್ಟ್ರದ ಶತ್ರುಗಳ ವಿರುದ್ಧದ ಸಮರ ಮುಂದುವರೆಯುತ್ತದೆ ಎಂದು ಟ್ವೀಟ್ ಮಾಡಿದ್ದರು. ಆದರೆ ರಾಜಭವನ ಈ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದು, "ರಾಜ್ಯಪಾಲರು ಹುದ್ದೆಯನ್ನು ತ್ಯಜಿಸುವ ಆಯ್ಕೆಯನ್ನು ಪರಿಗಣಿಸುತ್ತಿದ್ದಾರೆ ಎಂಬ ಸುದ್ದಿ ಆಧಾರವಿಲ್ಲದ್ದು" ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT