ಕಿರಣ್ ರಿಜಿಜು 
ದೇಶ

ಹೀಗಾಗಬಾರದಿತ್ತು: ಕೊಲಿಜಿಯಂ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆ ಖಂಡಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

ನವದೆಹಲಿ: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ನಡೆಯಬಾರದಿತ್ತು ಎಂದು ಹೇಳಿದೆ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ(ಎನ್‌ಜೆಎಸಿ)ದ ಬಗ್ಗೆ ಅಸಮಾಧಾನ ಇದೆಯೇ? ಆದ್ದರಿಂದಲೇ ಶಿಫಾರಸು ಮಾಡಿದ ಹೆಸರುಗಳನ್ನು ತಡೆಹಿಡಿಯಲಾಗಿದೆಯೇ? ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾವನ್ನು ಪ್ರಶ್ನಿಸಿದೆ.

"ಉನ್ನತ ಸ್ಥಾನದಲ್ಲಿರುವ ಯಾರಾದರೂ ಹಾಗೆ ಹೇಳಿದಾಗ ... ಅದು ಆಗಬಾರದಿತ್ತು..." ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್. ಓಕಾ ಅವರ ಪೀಠ ಹೇಳಿದೆ. ಒಂದು ಸಲ ಶಿಫಾರಸು ಮಾಡಿದ ಹೆಸರುಗಳನ್ನು ವಿಳಂಬವಿಲ್ಲದೆ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರನ್ನು ನೇಮಕ ಮಾಡುವಲ್ಲಿ ಸರ್ಕಾರ ಹೆಚ್ಚಿನ ಅಧಿಕಾರವನ್ನು ಹೊಂದಿಲ್ಲದಿರುವ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಮತ್ತು ಕೊಲಿಜಿಯಂ ವ್ಯವಸ್ಥೆಯು ಸಂವಿಧಾನಕ್ಕೆ “ಅನ್ಯ” ಎಂದು ಪ್ರಸ್ತುತ ನೇಮಕಾತಿ ಕಾರ್ಯವಿಧಾನವನ್ನು ಟೀಕಿಸಿದ್ದರು.

“ದಯವಿಟ್ಟು ಇದನ್ನು ಪರಿಹರಿಸಿ ಮತ್ತು ಈ ವಿಷಯದಲ್ಲಿ ನ್ಯಾಯಾಂಗ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಬೇಡಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು  ‘ಕೆಲವೊಮ್ಮೆ ಮಾಧ್ಯಮ ವರದಿಗಳು ತಪ್ಪಾಗಿರುತ್ತವೆ’ ಎಂದು ಹೇಳಿದರು.

ಅಟಾರ್ನಿ ಜನರಲ್ ಅವರೇ, ನಾನು ಎಲ್ಲಾ ಪತ್ರಿಕಾ ವರದಿಗಳನ್ನು ನಿರ್ಲಕ್ಷಿಸಿದ್ದೇನೆ. ಆದರೆ ಇದು ಸಂದರ್ಶನವೊಂದರಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಹೇಳಿದ್ದು. ನಾನು ಬೇರೆ ಏನನ್ನೂ ಹೇಳುತ್ತಿಲ್ಲ. ನಾವು ಮಾಡಬೇಕಾದರೆ, ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿ ಕೌಲ್ ಅವರು ಆರ್ ವೆಂಕಟರಮಣಿ ಅವರಿಗೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT