ವಸಂತ ವಾಲ್ಜಿಭಾಯಿ ಖೇತಾನಿ 
ದೇಶ

ಎಎಪಿಗೆ ಹಿನ್ನಡೆ: ಗುಜರಾತ್ ಚುನಾವಣಾ ಕಣ ತೊರೆದು ಬಿಜೆಪಿ ಸೇರಿದ ಮತ್ತೊಬ್ಬ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ!

ಗುಜರಾತ್ ನಲ್ಲಿ ಎಎಪಿಗೆ ಮತ್ತೊಂದು ಹಿನ್ನಡೆಯಾಗಿದ್ದು ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಿದ್ದರೂ ಆಮ್ ಆದ್ಮಿ ಪಕ್ಷ(ಎಎಪಿ) ಅಭ್ಯರ್ಥಿಯೊಬ್ಬ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಅಹಮದಾಬಾದ್: ಗುಜರಾತ್ ನಲ್ಲಿ ಎಎಪಿಗೆ ಮತ್ತೊಂದು ಹಿನ್ನಡೆಯಾಗಿದ್ದು ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಿದ್ದರೂ ಆಮ್ ಆದ್ಮಿ ಪಕ್ಷ(ಎಎಪಿ) ಅಭ್ಯರ್ಥಿಯೊಬ್ಬ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. 

ಚುನಾವಣೆಗೆ ಮುನ್ನ ಕಚ್ ಜಿಲ್ಲೆಯ ಅಬ್ದಾಸಾ ವಿಧಾನಸಭೆಯ ಅಭ್ಯರ್ಥಿ ವಸಂತ ವಾಲ್ಜಿಭಾಯಿ ಖೇತಾನಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇದಕ್ಕೂ ಮುನ್ನ ಸೂರತ್ ಪೂರ್ವ ಕ್ಷೇತ್ರದಿಂದ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ನಾಮಪತ್ರ ಹಿಂಪಡೆದಿದ್ದರು. ಎಎಪಿ ಕಛ್ ಜಿಲ್ಲಾ ಸಮಿತಿ ಅಧ್ಯಕ್ಷ ರೋಹಿತ್ ಗೌರ್ ಮಾತನಾಡಿ, ಭಾನುವಾರ ಸಂಜೆಯಿಂದ ಪಕ್ಷದ ಅಭ್ಯರ್ಥಿ ವಸಂತ್ ಭಾಯ್ ಅವರನ್ನು ಸಂಪರ್ಕಿಸಲಾಗಲಿಲ್ಲ. ಬಿಜೆಪಿ ನಾಯಕರು ಖೇತಾನಿಯನ್ನು ಅಪಹರಿಸಿ ಕಾರ್ಖಾನೆಯಲ್ಲಿ ಬಂಧಿಸಿದ್ದಾರೆ ಎಂದು ಆರೋಪಿಸಿದರು.

ಏತನ್ಮಧ್ಯೆ ಭಾನುವಾರ ಸಂಜೆ ಖೇತಾನಿ ಅವರ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು. ಅದರಲ್ಲಿ ಅವರು 'ದೇಶದ ಹಿತಾಸಕ್ತಿಯಿಂದ ನಾನು ಎಎಪಿ ತೊರೆದು ಬಿಜೆಪಿಗೆ ಸೇರುತ್ತಿದ್ದೇನೆ' ಎಂದು ಹೇಳಿದ್ದರು. ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣೆಯಿಂದ ಹಿಂದೆ ಸರಿದು ಬಿಜೆಪಿ ಸೇರಿದ್ದೇನೆ. ಬಿಜೆಪಿ ಸೇರಿದ ನಂತರ, ಖೇತಾನಿ ಅಬ್ದಾಸಾ ಬಿಜೆಪಿ ಅಭ್ಯರ್ಥಿ ಪ್ರದ್ಯುಮಾನ್ ಸಿಂಗ್ ಜಡೇಜಾಗೆ ಬೆಂಬಲವನ್ನು ಘೋಷಿಸಿದರು. ಜಡೇಜಾ 2017ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಅಬ್ದಾಸಾ ಸ್ಥಾನದಿಂದ ಗೆದ್ದಿದ್ದರು. ಆದರೆ 2020ರಲ್ಲಿ ಜಡೇಜಾ ಬಿಜೆಪಿ ಸೇರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT