ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಮೊರಾದಾಬಾದ್ ಜಿಲ್ಲೆಯಲ್ಲಿ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ತನ್ನ ಅಕ್ರಮ ಚಟುವಟಿಕೆಗಳಿಗೆ ಈತನಿಂದ ಬೆದರಿಕೆ ಎಂದು ನಂಬಿದ ಸ್ಥಳೀಯ ರೌಡಿ ಶೀಟರ್‌ನ ಸೂಚನೆ ಮೇರೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಠಾಕುರ್ದ್ವಾರ ಪ್ರದೇಶದಲ್ಲಿ 30 ವರ್ಷದ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೊರಾದಾಬಾದ್: ತನ್ನ ಅಕ್ರಮ ಚಟುವಟಿಕೆಗಳಿಗೆ ಈತನಿಂದ ಬೆದರಿಕೆ ಎಂದು ನಂಬಿದ ಸ್ಥಳೀಯ ರೌಡಿ ಶೀಟರ್‌ನ ಸೂಚನೆ ಮೇರೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಠಾಕುರ್ದ್ವಾರ ಪ್ರದೇಶದಲ್ಲಿ 30 ವರ್ಷದ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೊರಾದಾಬಾದ್ ಎಸ್‌ಎಸ್‌ಪಿ ಹೇಮರಾಜ್ ಮೀನಾ ಮಾತನಾಡಿ, ರೌಡಿ ಶೀಟರ್ ಅತುಲ್ ಶರ್ಮಾ ಪಂಡಿತ್ ಮತ್ತು ಅವರ ಸಹಾಯಕ ಗೋಲು ಅವರ ಸೂಚನೆ ಮೇರೆಗೆ ಬಿಲಾಲ್‌ ವಿಶಾಲ್ ವಾಲ್ಮೀಕಿಯನ್ನು ಗುಂಡು ಹಾರಿಸಿ ಕೊಂದಿದ್ದಾನೆ. ಸಂತ್ರಸ್ತನ ಕುಟುಂಬದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಆರೋಪಿಗಳಾದ ಅತುಲ್ ಶರ್ಮಾ, ಬಿಲಾಲ್ ಮತ್ತು ಗೋಲು ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಜೊತೆಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ, 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಶಾಲ್ ಅವರ ತಂದೆ ಮುಖೇಶ್ ವಾಲ್ಮೀಕಿ, 'ನನ್ನ ಮಗ ಇತ್ತೀಚೆಗೆ ಬಲಪಂಥೀಯ ಸಂಘಟನೆಗೆ ಸೇರಿದ್ದ ಮತ್ತು ಎಲ್ಲಾ ಸಮುದಾಯಗಳ ಯುವಕರಲ್ಲಿ ಆತನ ಜನಪ್ರಿಯತೆ ಹೆಚ್ಚುತ್ತಿತ್ತು. ದಲಿತನೊಬ್ಬ ಜನಪ್ರಿಯನಾಗುತ್ತಿರುವ ಸತ್ಯವನ್ನು ಒಪ್ಪಿಕೊಳ್ಳಲು ಶರ್ಮಾಗೆ ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.

ಈ ಹತ್ಯೆಯನ್ನು ಖಂಡಿಸಿ ಮಂಗಳವಾರದಿಂದ ಸ್ವಚ್ಛತಾ ಕಾರ್ಮಿಕರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಠಾಕುರ್ದ್ವಾರದ ಸರ್ಕಲ್ ಆಫೀಸರ್ ಅರ್ಪಿತ್ ಕಪೂರ್, 'ಕೊಲೆಯ ನಂತರ ಇಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪ್ರಕರಣದಲ್ಲಿ ಹೆಸರಿಸಲಾದ ಎಲ್ಲಾ ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದು, ಅವರನ್ನು ಶೀಘ್ರವಾಗಿ ಬಂಧಿಸಲು ನಾವು ಪ್ರಯತ್ನಿಸುತ್ತಿದ್ದೇವೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ: ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್‌ ಭದ್ರತೆ ಹೆಚ್ಚಳ!

SHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!

SCROLL FOR NEXT