ಸಾಂದರ್ಭಿಕ ಚಿತ್ರ 
ದೇಶ

ಅಫ್ತಾಬ್ ವ್ಯಾನ್ ಮೇಲೆ ದಾಳಿ ಮಾಡಿದ ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ

ಅಫ್ತಾಬ್ ಪೂನಾವಾಲಾ ಇದ್ದ ವ್ಯಾನ್ ಅನ್ನು ಸುತ್ತುವರಿದ ಗುಂಪಿನಲ್ಲಿದ್ದ ಇಬ್ಬರು ದಾಳಿಕೋರರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನವದೆಹಲಿ: ಅಫ್ತಾಬ್ ಪೂನಾವಾಲಾ ಇದ್ದ ವ್ಯಾನ್ ಅನ್ನು ಸುತ್ತುವರಿದ ಗುಂಪಿನಲ್ಲಿದ್ದ ಇಬ್ಬರು ದಾಳಿಕೋರರನ್ನು ದೆಹಲಿ ನ್ಯಾಯಾಲಯವು ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆಯುಧ ಹಿಡಿದಿದ್ದ ಕುಲದೀಪ್ ಠಾಕೂರ್ ಮತ್ತು ನಿಗಮ್ ಗುರ್ಜರ್ ಅವರನ್ನು ಸೋಮವಾರ ಬಂಧಿಸಿ ಮಂಗಳವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ದೆಹಲಿ ಪೊಲೀಸರ ಪ್ರಕಾರ, ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಹೊರಗೆ ಪೂನಾವಾಲಾ ಅವರ ವ್ಯಾನ್ ಅನ್ನು ಕಾರೊಂದು ಓವರ್‌ಟೇಕ್ ಮಾಡುವ ಮೂಲಕ ನಿಲ್ಲಿಸಿತು. ಪೂನಾವಾಲಾನನ್ನು ಸುಳ್ಳು ಪತ್ತೆ ಪರೀಕ್ಷೆಗಾಗಿ ಅಲ್ಲಿಗೆ ಕರೆತರಲಾಗಿತ್ತು.

ಇದೀಗ ಎಫ್‌ಎಸ್‌ಎಲ್‌ನ ಹೊರಗೆ ಬಿಎಸ್‌ಎಫ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಪೂನಾವಾಲಾಗೆ ಹಾನಿ ಮಾಡುವ ಉದ್ದೇಶದಿಂದ ಕಾರಿನಿಂದ ಹೊರಬಂದ ಕೆಲವರು ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆ. ಗುರುಗ್ರಾಮದ ನಿವಾಸಿಗಳಾದ ಇಬ್ಬರು ವ್ಯಕ್ತಿಗಳು ಕತ್ತಿಗಳನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಇತರೆ ದಾಳಿಕೋರರಿಗಾಗಿ ತಂಡ ಶೋಧ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನರ ಗುಂಪು ಕಾರಿನಲ್ಲಿ ಬಂದಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ನಾಲ್ಕೈದು ಜನ ಇದ್ದರು. ವಿಚಾರಣೆ ವೇಳೆ ಇತರರು ಶಾಮೀಲಾಗಿರುವುದು ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಈ ಸಂಬಂಧ ಪ್ರಶಾಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 186, 353, 147, 148 ಮತ್ತು 149ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.  ಇದಲ್ಲದೆ, ಎಫ್‌ಎಸ್‌ಎಲ್ ಅಧಿಕಾರಿಗಳು ಸೋಮವಾರ ಸುಮಾರು ಏಳು ಗಂಟೆಗಳ ಕಾಲ ಪೂನಾವಾಲಾ ಅವರ ಸುಳ್ಳು ಪತ್ತೆ ಪರೀಕ್ಷೆಯನ್ನು ನಡೆಸಿದರು.

ಸುಳ್ಳು ಪತ್ತೆ ಪರೀಕ್ಷೆಯು ಮತ್ತಷ್ಟು ಮುಂದುವರಿಯುವ ಸಾಧ್ಯತೆಯಿದೆ ಎಂದು ಎಫ್‌ಎಸ್‌ಎಲ್‌ನ ಉಪನಿರ್ದೇಶಕ ಸಂಜೀವ್ ಗುಪ್ತಾ ಹೇಳಿದ್ದಾರೆ.

ನವೆಂಬರ್ 26 ರಂದು ನ್ಯಾಯಾಲಯವು ಪೂನಾವಾಲಾ ಅವರನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ತನ್ನ ಲಿವ್ ಇನ್ ರಿಲೇಷನ್‌ಶಿಪ್‍‌ನಲ್ಲಿದ್ದ ಶ್ರದ್ಧಾಳ ಕತ್ತು ಹಿಸುಕಿ ಕೊಂದ ನಂತರ ದೇಹವನ್ನು 36 ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಪೂನಾವಾಲನನ್ನು ನವೆಂಬರ್ 12 ರಂದು ಬಂಧಿಸಲಾಯಿತು. ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT