ಅಪಘಾತ (ಸಂಗ್ರಹ ಚಿತ್ರ) 
ದೇಶ

ಮಗ ಚಾಲಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಅಪಘಾತ; ಹೃದಯಾಘಾತದಿಂದ ತಂದೆ ನಿಧನ

ಮಗ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಹೃದಯಾಘಾತಕ್ಕೆ ಒಳಗಾಗಿದ್ದ ಸಾವನ್ನಪ್ಪಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 

ನವದೆಹಲಿ: ಮಗ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಹೃದಯಾಘಾತಕ್ಕೆ ಒಳಗಾಗಿದ್ದ ಸಾವನ್ನಪ್ಪಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. 

ಹೃದಯಾಘಾತಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ಆತನ ಪುತ್ರ ಕಾರಿನಲ್ಲಿ ಕರೆದೊಯ್ಯುತ್ತಿದ್ದ. ಆದರೆ ದಾದ್ರಿ ಪೊಲೀಸ್ ಠಾಣೆಯ ಬಳಿ ತೆರಳುತ್ತಿದ್ದಂತೆಯೇ ಕಾರು ಅಪಘಾತಕ್ಕೊಳಗಾಗಿದೆ. 

ಬಹ್ಲೋಪುರ ನಿವಾಸಿ ಪ್ರದೀಪ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ತನ್ನ ತಂದೆ ಭೂಪ್ ಸಿಂಗ್ ಹಾಗೂ ಪತ್ನಿ, 9 ತಿಂಗಳ ಮಗಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದೆ ಎಂದು ತಿಳಿಸಿದ್ದಾರೆ 

ಪಚೌಟ ದೇವಸ್ಥಾನಕ್ಕೆ ಭೇಟಿ ನೀಡಿ ನೋಯ್ಡಾಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ತನ್ನ ತಂದೆಗೆ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರದೀಪ್ ವೇಗವಾಗಿ ನೋಯ್ಡಾಗೆ ವಾಪಸ್ಸಾಗುತ್ತಿದ್ದಾಗಿ ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಮಾರುತಿ ಬ್ರೆಜಾ ಕಾರು ಪೆರಿಫರಲ್ ಎಕ್ಸ್ ಪ್ರೆಸ್ ವೇ ಬಳಿ ನಿಯಂತ್ರಣ ಕಳೆದುಕೊಂಡಿದ್ದು, ಹೆದ್ದಾರಿಯ ಬಳಿ ಇದ್ದ ಹಳ್ಳಕ್ಕೆ ಬಿದ್ದಿದೆ ಘಟನೆಯಲ್ಲಿ ಪ್ರದೀಪ್ ತಂದೆ ಹಾಗೂ ಆತನ ಪತ್ನಿಗೆ ತಿವ್ರವಾದ ಗಾಯಗಳಾಗಿವೆ. ಪ್ರದೀಪ್ ತನ್ನ ತಂದೆಯನ್ನು ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಮೃತಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT