ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ 2022 
ದೇಶ

ಸ್ವಚ್ಛ ಸರ್ವೇಕ್ಷಣೆ 2022 ಪ್ರಶಸ್ತಿ  ಪ್ರಕಟ: ಇಂದೋರ್‌ ಸ್ವಚ್ಛ ನಗರ, ಮಧ್ಯಪ್ರದೇಶ ಸ್ವಚ್ಛ ರಾಜ್ಯ

ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಮಧ್ಯಪ್ರದೇಶ ಇಂದೋರ್‌ ಪಾತ್ರವಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ದೇಶದ ಸ್ವಚ್ಛ ನಗರ ಎಂಬ ಮಧ್ಯಪ್ರದೇಶ ಇಂದೋರ್‌ ಪಾತ್ರವಾಗಿದೆ.

ಹೌದು.. ದೇಶದ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಇಂದೋರ್‌ ಸತತ ಆರನೇ ಬಾರಿಗೆ ಪಾತ್ರವಾಗಿದೆ. ನಂತರದ ಎರಡು ಸ್ಥಾನಗಳಲ್ಲಿ ಅನುಕ್ರಮವಾಗಿ ರಾಜಸ್ಥಾನದ ಸೂರತ್‌ ಮತ್ತು ಮಹಾರಾಷ್ಟ್ರದ ನವಿ ಮುಂಬೈ ನಗರಗಳು ಇವೆ. ಕರ್ನಾಟಕದ ಮೈಸೂರು ಜಿಲ್ಲೆ ಟಾಪ್ 10 ಸ್ವಚ್ಛ ನಗರಗಳಲ್ಲಿರುವ ಕರ್ನಾಟಕದ ನಗರವಾಗಿದೆ. ಮೈಸೂರು ಪಟ್ಟಿಯಲ್ಲಿ 8ನೇ ಸ್ಥಾನವನ್ನು ಪಡೆದಿದೆ.

‘ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ 2022’ರ ಉತ್ತಮ ಪ್ರದರ್ಶನ ತೋರಿದ ರಾಜ್ಯಗಳ ವಿಭಾಗದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನ ಪಡೆದಿದೆ. ನಂತರದ ಸ್ಥಾನಗಳಲ್ಲಿ ಛತ್ತೀಸಗಢ ಮತ್ತು ಮಹಾರಾಷ್ಟ್ರ ರಾಜ್ಯಗಳು ಇವೆ.  100ಕ್ಕಿಂತ ಕಡಿಮೆ ಸ್ಥಳೀಯ ಸಂಸ್ಥೆಗಳನ್ನು ಹೊಂದಿರುವ ಸ್ವಚ್ಛ ರಾಜ್ಯಗಳ ಪಟ್ಟಿಯಲ್ಲಿ ತ್ರಿಪುರಾ ಪ್ರಥಮ ಸ್ಥಾನ ಪಡೆದಿದೆ.  1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಮಹಾರಾಷ್ಟ್ರದ ಪಂಚಗಣಿ ಮೊದಲ ಸ್ಥಾನ ಪಡೆದರೆ, ನಂತರದ ಸ್ಥಾನವನ್ನು ಛತ್ತೀಸಗಢದ ಪಟಾನ್‌ ಪಡೆದಿದೆ. ಗಂಗಾ ತೀರದ ಸ್ವಚ್ಛನಗರ ಎಂಬ ಹೆಗ್ಗಳಿಕೆಗೆ ಹರಿದ್ವಾರ ಪಾತ್ರವಾಗಿದೆ. 

ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸ್ವಚ್ಛತೆಗೆ ಸಂಬಂಧಿಸಿದ ಆರು ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಚ್ಛ ಭಾರತ ದಿವಸದ ಅಂಗವಾಗಿ ಭಾನುವಾರ ಪ್ರದಾನ ಮಾಡಲಿದ್ದಾರೆ.  ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್‌ ಸಿಂಗ್‌ ಪುರಿ ಅವರು ಈ ವೇಳೆ ಉಪಸ್ಥಿತರಿದ್ದರು.

ಮುರ್ಮು ಅವರಿಂದ 6 ಪ್ರಶಸ್ತಿಗಳ ಪ್ರದಾನ 
ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ ದಿವಸ ಆಚರಣೆ ಮಾಡಲಾಗುತ್ತದೆ. ಸ್ವಚ್ಛ ಸರ್ವೇಕ್ಷಣೆ ಗ್ರಾಮೀಣ–2022, ಸ್ವಚ್ಛತಾ ಹಿ ಸೇವಾ, ಸುಜ್ಲಮ್‌ 1.0 ಮತ್ತು 2.0, ಜಲ್‌ ಜೀವನ ಮಿಶನ್‌ ಕಾರ್ಯನಿರ್ವಹಣೆ ಮೌಲ್ಯಮಾಪನ, ಹರ್ ಘರ್‌ ಜಲ್‌ ಪ್ರಮಾಣೀಕರಣ, ಸ್ಟಾರ್ಟ್‌ ಅಪ್‌ ಗ್ರ್ಯಾಂಡ್‌ ಚಾಲೆಂಜ್‌ ಪ್ರಶಸ್ತಿಗಳನ್ನು ಮುರ್ಮು ಅವರು ಪ್ರದಾನ ಮಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT