ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರ, ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊತ್ತಿದ್ದ ಮಹಾರಾಷ್ಟ್ರದ ವ್ಯಕ್ತಿ 9 ವರ್ಷಗಳ ನಂತರ ಬಂಧನ

ಒಂಬತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ 29 ವರ್ಷದ ಆರೋಪಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಪಾಲ್ಘರ್: ಒಂಬತ್ತು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ 29 ವರ್ಷದ ಆರೋಪಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರೋಪಿ, ಸುಲ್ತಾನ್ ಅಲಿಯಾಸ್ ರಾಜಾ ನೂರ್‌ ಮೊಹಮ್ಮದ್ ಶೇಖ್, 2013ರ ಫೆಬ್ರವರಿಯಲ್ಲಿ 19 ವರ್ಷದ ಮಹಿಳೆಗೆ ಮತ್ತು ಬರುವ ಔಷಧಿ ಬೆರೆಸಿದ ಪಾನೀಯವನ್ನು ನೀಡಿ ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಮೀರಾ ಭಯಂದರ್-ವಸಾಯಿ ವಿರಾರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪ್ರಮೋದ್ ಬಡಾಖ್ ಹೇಳಿದ್ದಾರೆ.

ಸಂತ್ರಸ್ತೆ ಗರ್ಭಿಣಿಯಾಗಿದ್ದಳು. ಆದರೆ, ಈ ಬಗ್ಗೆ ಯಾರಿಗೂ ತಿಳಿಸದಂತೆ ಆರೋಪಿಯು ಕೇಳಿಕೊಂಡಿದ್ದಾನೆ. ಇಲ್ಲದಿದ್ದರೆ ಆಕೆಯ ಆಕ್ಷೇಪಾರ್ಹ ವಿಡಿಯೋ ಕ್ಲಿಪ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾನೆ. ಆರೋಪಿ ಸಂತ್ರಸ್ತೆಯನ್ನು ಥಳಿಸಿ ನಿಂದಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

2013ರ ಏಪ್ರಿಲ್ 22ರಂದು ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪಾಲ್ಘರ್‌ನ ನಲ್ಲಸೊಪಾರ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಪೊಲೀಸ್ ಅಪರಾಧ ಘಟಕದ ತಂಡವು, ತಮಗೆ ಸಿಕ್ಕ ಖಚಿತ ಮಾಹಿತಿಯನ್ನು ಆಧರಿಸಿ ನಲ್ಲಸೊಪಾರ ಪ್ರದೇಶದಲ್ಲಿ ಆರೋಪಿಯನ್ನು ಶನಿವಾರ ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT