ಮಲ್ಲಿಕಾರ್ಜುನ ಖರ್ಗೆ 
ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಅಧಿಕೃತವಾಗಿ ಪ್ರಚಾರ ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷೀಯ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದಿನಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದಿನಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಖರ್ಗೆ, ಉದಯಪುರದಲ್ಲಿ ಪಕ್ಷ ಕೈಗೊಂಡ ಒಬ್ಬ ವ್ಯಕ್ತಿ ಒಂದು ಹುದ್ದೆ ನಿರ್ಣಯದಂತೆ ನಾಮಪತ್ರ ಸಲ್ಲಿಸಿದ ದಿನವೇ ರಾಜ್ಯಸಭೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಎದುರಾಳಿ ವಿರುದ್ಧವಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ, ಪಕ್ಷವನ್ನು ಬಲಗೊಳಿಸಬೇಕಾಗಿದೆ ಎಂದು ಅವರು ಹೇಳಿದರು. 

ಬಿಜೆಪಿ ಟೀಕೆ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ನಿರುದ್ಯೋಗ, ಹಣದುಬ್ಬರ ಏರಿಕೆ ಕುರಿತು ಆಡಳಿತಾರೂಢ ಪಕ್ಷ ನೀಡಿದ ಎಲ್ಲಾ ಭರವಸೆಗಳು ಈಡೇರಿಲ್ಲ  ಎಂದರು.

ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಪರ ಪ್ರಚಾರವಾಗಿ ಮೂವರು ಪಕ್ಷದ ಮುಖಂಡರು ವಕ್ತಾರರ ಸ್ಥಾನವನ್ನು ತೊರೆದಿದ್ದಾರೆ. ದೀಪೆಂದರ್ ಎಸ್ ಹೂಡಾ, ಸೈಯದ್ ನಾಸೀರ್ ಹುಸೇನ್ ಮತ್ತು ಗೌರವ್ ವಲ್ಲಭ್ ಅಧಿಕೃತ ರಾಷ್ಟ್ರ ವಕ್ತಾರರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಬೇಕು, ಈ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕು ಎಂದು ಗೌರವ್ ವಲ್ಲಭ್ ಸುದ್ದಿಗಾರರಿಗೆ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT