ಕೇಜ್ರಿವಾಲ್ 
ದೇಶ

ಗುಜರಾತ್: ಕೇಜ್ರಿವಾಲ್ ನತ್ತ ಪ್ಲಾಸ್ಟಿಕ್ ಬಾಟಲಿ ಎಸೆತ

ಗುಜರಾತಿನ ರಾಜ್ ಕೋಟ್ ನಗರದಲ್ಲಿ ನಡೆದ ಗರ್ಭಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರತ್ತ ಪ್ಲಾಸ್ಟಿಕ್ ನೀರಿನ ಬಾಟಲಿ ಎಸೆಯಲಾಗಿದೆ. ಆದರೆ, ಅದು ಅವರನ್ನು ತಾಗಿಲ್ಲ. ಅವರ ತಲೆ ಪಕ್ಕದಲ್ಲಿ ಹೋಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಭಾನುವಾರ ಹೇಳಿದ್ದಾರೆ.

ರಾಜ್ ಕೋಟ್: ಗುಜರಾತಿನ ರಾಜ್ ಕೋಟ್ ನಗರದಲ್ಲಿ ನಡೆದ ಗರ್ಭಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರತ್ತ ಪ್ಲಾಸ್ಟಿಕ್ ನೀರಿನ ಬಾಟಲಿ ಎಸೆಯಲಾಗಿದೆ. ಆದರೆ, ಅದು ಅವರನ್ನು ತಾಗಿಲ್ಲ. ಅವರ ತಲೆ ಪಕ್ಕದಲ್ಲಿ ಹೋಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಭಾನುವಾರ ಹೇಳಿದ್ದಾರೆ.

ಶನಿವಾರ ರಾತ್ರಿ ನವರಾತ್ರಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಿಂದಿನಿಂದ ಎಎಪಿ ರಾಷ್ಟ್ರೀಯ ಸಂಚಾಲಕರತ್ತ ಬಾಟಲಿ ಎಸೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೂಡಲೇ ಭದ್ರತಾ ಅಧಿಕಾರಿಗಳು ಮತ್ತು ಪಕ್ಷದ ಹಿರಿಯ ಮುಖಂಡರು ಕೇಜ್ರಿವಾಲ್ ಅವರನ್ನು ಸುತ್ತುವರೆದಿದ್ದಾರೆ. 

ಕೆಲ ದೂರದಿಂದ ಬಾಟಲಿ ಎಸೆಯಲಾಗಿದೆ. ಅದು ಕೇಜ್ರಿವಾಲ್ ತಲೆಯತ್ತ ಸಾಗಿದೆ. ಇದಕ್ಕೆಲ್ಲಾ ಪೊಲೀಸರನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂದು ಎಎಪಿ ಮಾಧ್ಯಮ ಸಮನ್ವಯಾಧಿಕಾರಿ ಸುಕಾನ್ ರಾಜ್ ಹೇಳಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರದಿಂದ ಎರಡು ದಿನ ಗುಜರಾತ್ ಭೇಟಿ ನೀಡಿದ್ದಾರೆ. ಭಗವಂತ್ ಮಾನ್ ಮತ್ತೊಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT