ಕೇಜ್ರಿವಾಲ್ 
ದೇಶ

ಗುಜರಾತ್: ಕೇಜ್ರಿವಾಲ್ ನತ್ತ ಪ್ಲಾಸ್ಟಿಕ್ ಬಾಟಲಿ ಎಸೆತ

ಗುಜರಾತಿನ ರಾಜ್ ಕೋಟ್ ನಗರದಲ್ಲಿ ನಡೆದ ಗರ್ಭಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರತ್ತ ಪ್ಲಾಸ್ಟಿಕ್ ನೀರಿನ ಬಾಟಲಿ ಎಸೆಯಲಾಗಿದೆ. ಆದರೆ, ಅದು ಅವರನ್ನು ತಾಗಿಲ್ಲ. ಅವರ ತಲೆ ಪಕ್ಕದಲ್ಲಿ ಹೋಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಭಾನುವಾರ ಹೇಳಿದ್ದಾರೆ.

ರಾಜ್ ಕೋಟ್: ಗುಜರಾತಿನ ರಾಜ್ ಕೋಟ್ ನಗರದಲ್ಲಿ ನಡೆದ ಗರ್ಭಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರತ್ತ ಪ್ಲಾಸ್ಟಿಕ್ ನೀರಿನ ಬಾಟಲಿ ಎಸೆಯಲಾಗಿದೆ. ಆದರೆ, ಅದು ಅವರನ್ನು ತಾಗಿಲ್ಲ. ಅವರ ತಲೆ ಪಕ್ಕದಲ್ಲಿ ಹೋಗಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಭಾನುವಾರ ಹೇಳಿದ್ದಾರೆ.

ಶನಿವಾರ ರಾತ್ರಿ ನವರಾತ್ರಿ ಕಾರ್ಯಕ್ರಮಕ್ಕೆ ಕೇಜ್ರಿವಾಲ್ ಭೇಟಿ ನೀಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಿಂದಿನಿಂದ ಎಎಪಿ ರಾಷ್ಟ್ರೀಯ ಸಂಚಾಲಕರತ್ತ ಬಾಟಲಿ ಎಸೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೂಡಲೇ ಭದ್ರತಾ ಅಧಿಕಾರಿಗಳು ಮತ್ತು ಪಕ್ಷದ ಹಿರಿಯ ಮುಖಂಡರು ಕೇಜ್ರಿವಾಲ್ ಅವರನ್ನು ಸುತ್ತುವರೆದಿದ್ದಾರೆ. 

ಕೆಲ ದೂರದಿಂದ ಬಾಟಲಿ ಎಸೆಯಲಾಗಿದೆ. ಅದು ಕೇಜ್ರಿವಾಲ್ ತಲೆಯತ್ತ ಸಾಗಿದೆ. ಇದಕ್ಕೆಲ್ಲಾ ಪೊಲೀಸರನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂದು ಎಎಪಿ ಮಾಧ್ಯಮ ಸಮನ್ವಯಾಧಿಕಾರಿ ಸುಕಾನ್ ರಾಜ್ ಹೇಳಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರದಿಂದ ಎರಡು ದಿನ ಗುಜರಾತ್ ಭೇಟಿ ನೀಡಿದ್ದಾರೆ. ಭಗವಂತ್ ಮಾನ್ ಮತ್ತೊಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT