ರಾಹುಲ್ ಗಾಂಧಿ 
ದೇಶ

ಗಾಂಧಿಯಂತೆ, ನಾವು ಅನ್ಯಾಯದ ವಿರುದ್ಧ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ: ರಾಹುಲ್ ಗಾಂಧಿ

'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.

ನವದೆಹಲಿ: 'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು. ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

'ಬಾಪು ನಮಗೆ ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ನಡೆಯಲು ಕಲಿಸಿದರು. ಅವರು ಪ್ರೀತಿ, ಸಹಾನುಭೂತಿ, ಸಾಮರಸ್ಯ ಮತ್ತು ಮಾನವೀಯತೆಯ ಅರ್ಥವನ್ನು ವಿವರಿಸಿದರು' ಎಂದು ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ಇಂದು ಗಾಂಧಿ ಜಯಂತಿ, ಅವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ನಮ್ಮ ಭಾರತವನ್ನು ಒಂದುಗೂಡಿಸುತ್ತೇವೆ ಎಂದು ನಾವು ಪ್ರತಿಜ್ಞೆ ಮಾಡುತ್ತೇವೆ' ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯ ದೃಶ್ಯ ಸೇರಿದಂತೆ ಮಹಾತ್ಮ ಗಾಂಧಿಯವರ ವಿಡಿಯೋ ತುಣುಕನ್ನು ಸಹ ಹಂಚಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ಸದ್ಯ ಕರ್ನಾಟಕವನ್ನು ಪ್ರವೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT