ಸಂಗ್ರಹ ಚಿತ್ರ 
ದೇಶ

PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಪಾಪುಲರ್ ಫ್ರಂಟ್ ಇಂಡಿಯಾ (PFI) ನಿಷೇಧದ ಬಳಿಕ SDPI ಅನ್ನೂ ನಿಷೇಧಿಸಬೇಕು ಎಂಬ ಊಹಾಪೋಹಗಳಿಗೆ ಚುನಾವಣಾ ಆಯೋಗ ಇಂದು ತೆರೆ ಎಳೆದಿದ್ದು, PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು: ಪಾಪುಲರ್ ಫ್ರಂಟ್ ಇಂಡಿಯಾ (PFI) ನಿಷೇಧದ ಬಳಿಕ SDPI ಅನ್ನೂ ನಿಷೇಧಿಸಬೇಕು ಎಂಬ ಊಹಾಪೋಹಗಳಿಗೆ  ಚುನಾವಣಾ ಆಯೋಗ ಇಂದು ತೆರೆ ಎಳೆದಿದ್ದು, PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ನಿಷೇಧಿತ ಪಿಎಫ್‌ಐ (PFI) ಸಂಘಟನೆಯೊಂದಿಗೆ ಎಸ್‌ಡಿಪಿಐ (SDPI) ಯಾವುದೇ ಸಂಬಂಧ ಹೊಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗ (Election Commission) ಸ್ಪಷ್ಟನೆ ನೀಡಿದೆ. ಸೆಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಪಿಎಫ್‌ಐ (PFI) ಸಂಘಟನೆಯನ್ನು ನಿಷೇಧಿಸಿತು. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪಿಎಫ್‌ಐ ಹಾಗೂ ಅದರ 8 ಅಂಗ ಸಂಸ್ಥೆಗಳನ್ನು ನಿಷೇಧಿಸಿತ್ತು.

ಎಸ್‌ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ಪಿಎಫ್‌ಐ ನೊಂದಿಗೆ ಯಾವುದೇ ನಂಟಿರುವುದು ಕಂಡುಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ (Rajiv Kumar) ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಈ ಕುರಿತು ಮಾತನಾಡಿರುವ ಅವರು, ಪಿಎಫ್‌ಐ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ನಮಗೆ ತಿಳಿದಿದೆ. ಆದರೆ ಎಸ್‌ಡಿಪಿಐ ಎಲ್ಲಾ ರೀತಿಯ ಅಗತ್ಯ ದಾಖಲೆ ಸಲ್ಲಿಸಿದ್ದು, ಈವರೆಗೂ ಪಿಎಫ್‌ಐನೊಂದಿಗೆ ಯಾವುದೇ ಸಂಪರ್ಕ ಹೊಂದಿರುವುದು ಕಂಡುಬಂದಿಲ್ಲ. ಎಸ್‌ಡಿಪಿಐ ಕಡೆಯಿಂದ ಲೋಪವಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

SDPI ಸ್ಪಷ್ಟನೆ
ಇನ್ನು ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ SDPI, '2009ರ ಜೂನ್ 21ರಂದು ಎಸ್‌ಡಿಪಿಐ ಅಸ್ತಿತ್ವಕ್ಕೆ ಬಂದಿದ್ದು, 2010 ಏಪ್ರಿಲ್ 13ರಂದು ಭಾರತದ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಂಡಿದೆ. ಇಲ್ಲಿಯವರೆಗೆ ಎಸ್‌ಡಿಪಿಐ ಕರ್ನಾಟಕ, ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಆಂಧ್ರಪ್ರದೇಶಗಳಲ್ಲಿ ಸದಸ್ಯರನ್ನು ಹೊಂದಿದ್ದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಆದಿವಾಸಿಗಳು ಸೇರಿದಂತೆ ಎಲ್ಲ ವರ್ಗದ ನಾಗರಿಕರ ಪ್ರಗತಿಗಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದೆ.

ಅಂತೆಯೇ SDPI ಇಲ್ಲಿಯವರೆಗೆ, ಕೇರಳ, ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ , ಆಂಧ್ರಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಎಸ್‌ಡಿಪಿಐ ಸದಸ್ಯ ಸ್ಥಾನವನ್ನು ಗೆದ್ದಿದೆ ಎಂದು ಹೇಳಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT