ಅನಿಲ್‌ ದೇಶಮುಖ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ.

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮುನ್ನ, ಎನ್‌ಸಿಪಿ ನಾಯಕನ ಅರ್ಜಿಯು ಆರು ತಿಂಗಳಿನಿಂದ ಬಾಕಿ ಉಳಿದಿರುವುದರಿಂದ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು.

ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್, 'ಅವರ (ಅನಿಲ್ ದೇಶಮುಖ್) ವಯಸ್ಸು (72), ಆರೋಗ್ಯ ಮತ್ತು ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಗಳಿಲ್ಲದಿರುವ ಅಂಶವನ್ನು ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು' ಎಂದು ವಾದಿಸಿದರು.

ಜಾರಿ ನಿರ್ದೇಶನಾಲಯದ (ಇ.ಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಅರ್ಜಿಯನ್ನು ವಿರೋಧಿಸಿ, 'ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗದ ಯಾವುದೇ ಕಾಯಿಲೆಗಳಿಂದ ದೇಶಮುಖ್ ಬಳಲುತ್ತಿಲ್ಲ' ಎಂದು ವಾದಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನವೆಂಬರ್ 2021 ರಲ್ಲಿ ಇಡಿಯಿಂದ ಬಂಧಿಸಲ್ಪಟ್ಟ ಅನಿಲ್ ದೇಶಮುಖ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮಾಡಿದ ಆರೋಪದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿತ್ತು. ನಂತರ ನಂತರ ಇ.ಡಿ ಅವರನ್ನು ಬಂಧಿಸಿದೆ.

ದೇಶಮುಖ್ ಅವರು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ  4.7 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ. ಅಕ್ರಮವಾಗಿ ಗಳಿಸಿದ ಹಣವನ್ನು ನಾಗ್ಪುರ ಮೂಲದ ಅವರ ಕುಟುಂಬದವರು ನಿಯಂತ್ರಿಸುವ ಶೈಕ್ಷಣಿಕ ಟ್ರಸ್ಟ್‌ ಶ್ರೀ ಸಾಯಿ ಶಿಕ್ಷಣ ಸಂಸ್ಥಾನಕ್ಕೆ ರವಾನಿಸಲಾಗಿದೆ ಎಂದು ಇ.ಡಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT