ಜನರ ಮೇಲೆ ಬಿದ್ದ ಬೆಂಕಿ ಹೊತ್ತಿದ್ದ ರಾವಣನ ಕಟೌಟ್ 
ದೇಶ

ವಿಜಯದಶಮಿ: ರಾವಣ ದಹನ ವೇಳೆ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅವಘಡ

ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಚಂಡೀಘಡ: ವಿಜಯದಶಮಿ ನಿಮಿತ್ತ ಆಯೋಜಿಸಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಹರ್ಯಾಣದ ಯಮುನಾನಗರದಲ್ಲಿ ಆಯೋಜಿಸಲಾಗಿದ್ದ ರಾವಣ ದಹನ ಕಾರ್ಯಕ್ರಮದ ವೇಳೆ ಬೆಂಕಿ ಹಚ್ಚಲಾಗಿದ್ದ ರಾವಣನ ದೊಡ್ಡ ಕಟೌಟ್ ವೊಂದು ನೆರೆದಿದ್ದವರ ಮೇಲೆ ಬಿದ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. 

ಹರ್ಯಾಣ ಯಮುನಾನಗರದಲ್ಲಿ ಸ್ಥಳೀಯರು ಆಯೋಜಿಸಿದ್ದ  ರಾವಣ ದಹನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ರಾವಣ ದಹನ ಬಳಿಕ ಬೆಂಕಿ ಹೊತ್ತಿಕೊಂಡಿದ್ದ ರಾವಣನ ಕಟೌಟ್ ನೋಡನೋಡುತ್ತಿದ್ದಂತೆಯೇ ಅಲ್ಲಿ ನೆರೆದಿದ್ದವರ ಮೇಲೆ ಬಿದ್ದಿದೆ.

ಅದೃಷ್ಟವಶಾತ್ ಅಪಾಯದ ಮುನ್ಸೂಚನೆ ಅರಿತ ಜನ ಅಲ್ಲಿಂದ ಕೂಡಲೇ ಚದುರಿದ್ದಾರೆ. ಹೀಗಾಗಿ ಯಾರಿಗೂ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT