ವಿಜಯ್ ಮಲ್ಯ 
ದೇಶ

ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ವಿಜಯ್ ಮಲ್ಯ ವಿರುದ್ಧ ಕೇಸು ದಾಖಲಿಸಿದ ದೆಹಲಿ ಪೊಲೀಸರು

ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ರೋಸ್ ಅವೆನ್ಯೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ' ಎಂದು ಅಧಿಕಾರಿ ಹೇಳಿದರು.

ಎಫ್‌ಐಆರ್ ಪ್ರಕಾರ, ಮಲ್ಯ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 174 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಯ ವಿರುದ್ಧ ದೂರುದಾರರು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಿಸಿದ್ದರು.

ಐಪಿಸಿಯ ಸೆಕ್ಷನ್ 174 A ಪ್ರಕಾರ, ಒಬ್ಬ ವ್ಯಕ್ತಿಯು ಹೈಕೋರ್ಟ್‌ನ ಮುಂದೆ ಹಾಜರಾಗಲು ಕಾನೂನುಬದ್ಧವಾಗಿ ಬದ್ಧನಾಗಿರುತ್ತಾನೆ, ಆ ನ್ಯಾಯಾಲಯದಿಂದ ಹೊರಡಿಸಲಾದ ಆದೇಶಕ್ಕೆ ವಿರುದ್ಧವಾಗಿ ಉದ್ದೇಶಪೂರ್ವಕವಾಗಿ ಹಾಜರಾಗದಿದ್ದರೆ, ಆಗ ಅಂತಹ ವ್ಯಕ್ತಿಯು ಈ ಸೆಕ್ಷನ್ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧಕ್ಕೆ ಗುರಿಯಾಗಿರುತ್ತಾನೆ.

ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ Vs ಕಿಂಗ್‌ಫಿಷರ್ ಏರ್‌ಲೈನ್ಸ್ ಎಂಬ ಪ್ರಕರಣದಲ್ಲಿ ಆರೋಪಿ ವಿಜಯ್ ಮಲ್ಯ ವಿರುದ್ಧ ಸೆಕ್ಷನ್ 174 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಎನ್‌ಡಿಒಹೆಚ್ ಮೇಲೆ ಅನುಸರಣೆ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ' ಎಂದು ಎಫ್‌ಐಆರ್‌ನ ಆಯ್ದ ಭಾಗದಲ್ಲಿ ತಿಳಿಸಿದೆ.

66 ವರ್ಷದ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಮಲ್ಯ ಅವರು ಮಾರ್ಚ್ 2016 ರಲ್ಲಿ ಭಾರತದಿಂದ ಪಲಾಯನ ಮಾಡಿದರು. ಅಂದಿನಿಂದ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ (ಇಂಗ್ಲೆಂಡ್) ವಾಸಿಸುತ್ತಿದ್ದಾರೆ. 2017ರ ಏಪ್ರಿಲ್‌ನಲ್ಲಿ ಸ್ಕಾಟ್ಲೆಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಅವರು ಜಾಮೀನಿನ ಮೇಲೆ ಇದ್ದಾರೆ. ಇದಕ್ಕೂ ಮೊದಲು, ಜುಲೈನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ನಾಲ್ಕು ತಿಂಗಳ ಶಿಕ್ಷೆಯನ್ನು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT