ಕೆಸಿ ಚಂದ್ರಶೇಖರರಾವ್, ಕವಿತಾ 
ದೇಶ

ಟಿಆರ್ ಎಸ್ ನಲ್ಲಿ ಒಡಕು? ರಾಷ್ಟ್ರೀಯ ಪಕ್ಷ ಘೋಷಣಾ ಸಮಾರಂಭದಿಂದ ಕವಿತಾ ದೂರ, ಅನೇಕ ಅನುಮಾನಗಳು 

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಇತ್ತೀಚಿಗೆ ತಮ್ಮ ಹೊಸ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರ ಸಮಿತಿ ಘೋಷಣಾ ಸಮಾರಂಭದಲ್ಲಿ ಕೆಸಿಆರ್ ಅವರ ಪುತ್ರಿ ಹಾಗೂ ಪಕ್ಷದ ಹಿರಿಯ ಮುಖಂಡರಾದ ಕೆ. ಕವಿತಾ ಗೈರಾದದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಇತ್ತೀಚಿಗೆ ತಮ್ಮ ಹೊಸ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರ ಸಮಿತಿ ಘೋಷಣಾ ಸಮಾರಂಭದಲ್ಲಿ ಕೆಸಿಆರ್ ಅವರ ಪುತ್ರಿ ಹಾಗೂ ಪಕ್ಷದ ಹಿರಿಯ ಮುಖಂಡರಾದ ಕೆ. ಕವಿತಾ ಗೈರಾದದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಈ ಹೈ ಪ್ರೊಪೈಲ್ ಸಮಾರಂಭದಿಂದ ಮಾತ್ರ ಕವಿತಾ ದೂರ ಉಳಿದಿಲ್ಲ. ಮುಂಬರುವ ಮುನುಗೊಡು ಉಪ ಚುನಾವಣೆಯ ಉಸ್ತುವಾರಿ ಪಟ್ಟಿಯಿಂದಲೂ ಅವರ ಹೆಸರನ್ನು ಕೈ ಬಿಡಲಾಗಿದೆ. ಇದು ಮತ್ತೆ ಕಣ್ಣು ಕೆಂಪಾಗುವಂತೆ ಮಾಡಿದೆ.

ಬುಧವಾರ ದಸರಾ ಹಬ್ಬದ ವೇಳೆ  ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಮತ್ತು ಕರ್ನಾಟಕದ ಜೆಡಿಎಸ್ ಮೂಲಕ ಬೆಂಬಲದೊಂದಿಗೆ  ಕೆಸಿಆರ್, ಬಿಎಸ್ ಆರ್ ರಾಷ್ಟ್ರೀಯ ಪಕ್ಷವನ್ನು ಘೋಷಿಸಿದರು.  ಹೊಸ ಪಕ್ಷ ಘೋಷಣೆ ದಿನ ಕವಿತಾ ಮನೆಯಲ್ಲಿದ್ದು ದಸರಾ ಆಚರಿಸಿರುವುದು ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸಿದೆ. ಶುಭ ಸಂದರ್ಭದಲ್ಲಿ ಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದ್ದಾಗಿ ಕವಿತಾ ಟ್ವೀಟ್ ಮಾಡಿದ್ದರು.

ಹೊಸ ಪಕ್ಷ ಘೋಷಣೆ ಸಮಾರಂಭದಲ್ಲಿ ಕೆಟಿಆರ್ ಕೂಡಾ ಪಾಲ್ಗೊಂಡಿದ್ದರು ಆದರೆ, ಕವಿತಾ ಟಿಆರ್ ಎಸ್ ಸಾಮಾನ್ಯ ಸಭೆ ಹಾಗೂ ಬಿಆರ್ ಎಸ್ ಘೋಷಣಾ ಸಮಾರಂಭದಿಂದ ದೂರ ಉಳಿದಿರುವ ಬಗ್ಗೆ ಬಿಜೆಪಿಯ ಕೆಲ ಮುಖಂಡರು ಅನುಮಾನ ವ್ಯಕ್ತಪಡಿಸುತ್ತಿರುವಂತೆಯೇ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಶ್ನೆ ಮಾಡಲಾಗುತ್ತಿದೆ.

ಈ ಕುರಿತು ಕವಿತಾ ಅವರ ಕಚೇರಿ ಹಾಗೂ ಟಿಆರ್ ಎಸ್ ಮುಖಂಡರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT