ಸಾಂದರ್ಭಿಕ ಚಿತ್ರ 
ದೇಶ

ದೆಹಲಿ ಅಬಕಾರಿ ನೀತಿ: 35 ಪ್ರದೇಶಗಳಲ್ಲಿ ಇಡಿ ಹೊಸ ದಾಳಿ

ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.

ನವದೆಹಲಿ: ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.

ದೆಹಲಿ, ಪಂಜಾಬ್ ಮತ್ತು ಹೈದರಾಬಾದ್‌ನ ಕೆಲವು ಸ್ಥಳಗಳಲ್ಲಿ ಸುಮಾರು 35 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಕೆಲವು ಮದ್ಯ ವಿತರಕರು, ಕಂಪನಿಗಳು ಮತ್ತು ಸಂಬಂಧಿತ ಘಟಕಗಳನ್ನು ಶೋಧಿಸಲಾಗುತ್ತಿದೆ.

ಜಾರಿ ನಿರ್ದೇಶನಾಲಯ (ED) ಈ ಪ್ರಕರಣದಲ್ಲಿ ಇದುವರೆಗೆ 103ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಈ ಪ್ರಕರಣದಲ್ಲಿ ಕಳೆದ ತಿಂಗಳು ಮದ್ಯ ಉದ್ಯಮಿ ಮತ್ತು ಮದ್ಯ ತಯಾರಿಕಾ ಕಂಪನಿ ಇಂಡೋಸ್ಪಿರಿಟ್‌ನ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹಂದ್ರು ಅವರನ್ನು ಬಂಧಿಸಿತ್ತು.

ಸಿಬಿಐ ಎಫ್ಐಆರ್ ದಾಖಲಿಸಿದ ನಂತರ ಅಕ್ರಮ ಹಣ ವರ್ಗಾವಣೆ ಕೇಸು ಹುಟ್ಟಿಕೊಂಟಿತು. ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ ನಂತರ ಮದ್ಯ ಯೋಜನೆ ಬಗ್ಗೆ ಅಧಿಕಾರಿಗಳು ತೀವ್ರ ಶೋಧ ನಡೆಸಿದರು. ಈ ಸಂಬಂಧ 11 ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT