ಜ್ಞಾನವಾಪಿ ಮಸೀದಿ 
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಪ್ರಕರಣದ ವಿಚಾರಣೆ ಅಕ್ಟೋಬರ್ 11ಕ್ಕೆ ಮುಂದೂಡಿಕೆ!

ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ.

ವಾರಣಾಸಿ: ಜ್ಞಾನವಾಪಿ ಮಸೀದಿಯೊಳಗೆ ಪತ್ತೆಯಾದ 'ಶಿವಲಿಂಗ' ಎಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್ ನಡೆಸುವಂತೆ ಕೋರಿ ಹಿಂದೂಗಳು ಸಲ್ಲಿಸಿದ ಮನವಿಯ ವಿಚಾರಣೆಯನ್ನು ವಾರಣಾಸಿಯ ನ್ಯಾಯಾಲಯ ಅಕ್ಟೋಬರ್ 11ಕ್ಕೆ ಮುಂದೂಡಿದೆ. 

ಇಂದು ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ವಾದವನ್ನು ಆಲಿಸಿದ ನಂತರ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಅಕ್ಟೋಬರ್ 11ರಂದು ಅರ್ಜಿಯ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ.

ವಜುಖಾನದಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್‌ಗೆ ಸಂಬಂಧಿಸಿದ ವಿಚಾರಣೆಯ ಸಂದರ್ಭದಲ್ಲಿ, ಎರಡೂ ಪಕ್ಷಗಳ ವಕೀಲರು ನ್ಯಾಯಾಲಯದಲ್ಲಿ ಹಾಜರಿದ್ದ ನಂತರ ನ್ಯಾಯಾಲಯದ ಆವರಣದ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಇದೇ ವೇಳೆ ನ್ಯಾಯಾಲಯದಲ್ಲಿ ಬೆಳಗ್ಗೆಯಿಂದಲೇ ಹಿಂದೂ-ಮುಸ್ಲಿಂ ಪಕ್ಷಗಳ ನಡುವೆ ಈ ವಿಚಾರವಾಗಿ ವಾಗ್ವಾದದ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆಯೇ ಎಲ್ಲ ಕಕ್ಷಿದಾರರು ತಮ್ಮ ವಕೀಲರ ಜತೆ ಸಭೆ ನಡೆಸಿ ನ್ಯಾಯಾಲಯದ ಸಂಭವನೀಯ ನಿರ್ಧಾರದ ಕುರಿತು ಚಿಂತನ ಮಂಥನ ನಡೆಸಿದರು. ಅದೇ ಸಮಯದಲ್ಲಿ, ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ಜ್ಞಾನವಾಪಿ ಮಸೀದಿ ಸಮೀಕ್ಷೆ ವೇಳೆ ದೊರೆತ ಶಿವಲಿಂಗಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಕಡೆಯವರು ಕಾರಂಜಿ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರೆ. ಮತ್ತೊಂದೆಡೆ ಹಿಂದೂಗಳ ಕಡೆಯವರು ಇದನ್ನು ಶಿವಲಿಂಗ ಎಂದು ಬಣ್ಣಿಸುತ್ತಲೇ ಜ್ಞಾನವಾಪಿ ಮಸೀದಿ ಪ್ರದೇಶದಲ್ಲಿರುವ ಶಿವಲಿಂಗವನ್ನು ಆದಿ ಎಂದು ಕರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!