ವಂದೇ ಭಾರತ್ ಎಕ್ಸ್‌ಪ್ರೆಸ್ 24 ಗಂಟೆಗಳಲ್ಲಿ ದುರಸ್ತಿ! 
ದೇಶ

ಎಮ್ಮೆಗಳಿಗೆ ಗುದ್ದಿ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಾನಿ; 24 ಗಂಟೆಯಲ್ಲಿ ದುರಸ್ತಿ!

ಹಾನಿಗೊಳಗಾದ ನೂತನ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ದುರಸ್ತಿ ಕಾರ್ಯ ಒಂದೇ ದಿನದೊಳಗೆ ಮುಗಿದು ಎಂದಿನಂತೆ ಸಂಚಾರಕ್ಕೆ ಸಿದ್ಧವಾಗಿದೆ.

ನವದೆಹಲಿ: ಹಾನಿಗೊಳಗಾದ ನೂತನ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ದುರಸ್ತಿ ಕಾರ್ಯ ಒಂದೇ ದಿನದೊಳಗೆ ಮುಗಿದು ಎಂದಿನಂತೆ ಸಂಚಾರಕ್ಕೆ ಸಿದ್ಧವಾಗಿದೆ.

ಗುಜರಾತ್‌ನಲ್ಲಿ ಎಮ್ಮೆಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗದ ಒಂದು ಭಾಗ ಮುರಿದು ಹೋಗಿತ್ತು. ರೈಲಿನ ಮುಂದಿನ ಮೂಗಿನಂತಹ ಭಾಗ ಎಫ್ ಆರ್ ಪಿಯಿಂದ ಮಾಡಲ್ಪಟ್ಟಿದೆ.

ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್ ಬಳಿ ಗುರುವಾರ ಬೆಳಿಗ್ಗೆ 11:15 ರ ಸುಮಾರಿಗೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ಮುಂದಿನ ಭಾಗ ಹಾನಿಗೊಳಗಾಗಿತ್ತು.

ಜಾನುವಾರುಗಳಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ರೈಲಿನ ಡ್ರೈವರ್ ಕೋಚ್ ನ ಮುಂದಿನ ಮೂಗಿನ ರೂಪದ ಭಾಗ ಮತ್ತು ಅದರ ಮೌಂಟಿಂಗ್ ಬ್ರಾಕೆಟ್‌ಗಳು ಹಾನಿಗೊಳಗಾಯಿತೇ ವಿನಃ ರೈಲಿನ ಪ್ರಮುಖ ಭಾಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹಾನಿಗೊಳಗಾದ ಭಾಗವನ್ನು ಅನ್ನು ಮುಂಬೈ ಸೆಂಟ್ರಲ್‌ನಲ್ಲಿರುವ ಕೋಚ್ ಕೇರ್ ಸೆಂಟರ್‌ನಲ್ಲಿ ಬದಲಾಯಿಸಲಾಯಿತು ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT