ಇಡಿ ಅಧಿಕಾರಿಗಳು 
ದೇಶ

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ 

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ  ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. 

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ  ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. 

ದೆಹಲಿ-ಎನ್ ಸಿಆರ್, ಪಂಜಾಬ್ ಮತ್ತು ತೆಲಂಗಾಣದ ರಾಜಧಾನಿ ಹೈದರಾಬಾದಿನ 35 ಕಡೆಗಳಲ್ಲಿ ಶುಕ್ರವಾರ ಇಡಿ ಶೋಧ ಕಾರ್ಯಾಚರಣೆ ನಡೆಸಿತು. ಲಿಕ್ಕರ್ ವ್ಯಾಪಾರಿಗಳು, ವಿತರಣಾ ಕಂಪನಿಗಳು ಮತ್ತು ಅವುಗಳೊಂದಿಗೆ ಸಂಪರ್ಕ ಹೊಂದಿದ್ದ ಸಂಸ್ಥೆಗಳ ವಿರುದ್ಧ ನಡೆಸಿದ ದಾಳಿ ವೇಳೆಯಲ್ಲಿ ಕೋಟ್ಯಂತರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.

ಕೆಲವು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿದೆ. ಆದರೆ, ಇವುಗಳನ್ನು ವಶಕ್ಕೆ ಪಡೆದ ಸ್ಥಳಗಳ ಹೆಸರನ್ನು ಮಾತ್ರ  ಬಹಿರಂಗಪಡಿಸಿಲ್ಲ.

ವಿವಿಧ ಆಲ್ಕೋಹಾಲಿಕ್ ಬೇವರಿಜ್ ಆಮದು ಮತ್ತು ರಫ್ತು ಮಾಡುತ್ತಿದ್ದ ಕಂಪನಿಯೊಂದರ ನಗರದ  ಉದ್ಯಮಿ, ದೆಹಲಿ ಮೂಲದ ಟಿವಿ ವಾಹಿನಿಯೊಂದರ ನಿರ್ದೇಶಕರು ಹಾಗೂ ಪಂಜಾಬಿನ ಮಾಜಿ  ಶಾಸಕರೊಬ್ಬರಿಗೆ ಸೇರಿದ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

 ಇಡಿ ಈವರೆಗೂ 103 ಕ್ಕೂ ಅಧಿಕ ಕಡೆಗಳಲ್ಲಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಮತ್ತಿತರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT