ಪ್ರಾತಿನಿಧಿಕ ಚಿತ್ರ 
ದೇಶ

ಮುಂಬೈ: ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂ. ಮೌಲ್ಯದ 50 ಕೆಜಿ ಕೊಕೇನ್ ವಶ

ಮುಂಬೈನ ನವ ಶೇವಾ ಬಂದರಿನಲ್ಲಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂಪಾಯಿ ಮೌಲ್ಯದ 50 ಕೆ.ಜಿಗಳಷ್ಟು 'ಉತ್ತಮ ಗುಣಮಟ್ಟದ' ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆಆರ್‌ಐ) ವಶಪಡಿಸಿಕೊಂಡಿದೆ.

ಮುಂಬೈ: ಮುಂಬೈನ ನವ ಶೇವಾ ಬಂದರಿನಲ್ಲಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕಂಟೈನರ್‌ನಿಂದ 502 ಕೋಟಿ ರೂಪಾಯಿ ಮೌಲ್ಯದ 50 ಕೆ.ಜಿಗಳಷ್ಟು 'ಉತ್ತಮ ಗುಣಮಟ್ಟದ' ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆಆರ್‌ಐ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಮುದ್ರದ ಕಂಟೈನರ್‌ಗಳ ಮೂಲಕ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೊಕೇನ್‌ನ ಅತಿ ದೊಡ್ಡ ವಶ ಇದಾಗಿದ್ದು, ಗುರುವಾರ ಡ್ರಗ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ದಕ್ಷಿಣ ಆಫ್ರಿಕಾದಿಂದ ನವ ಶೇವಾ ಬಂದರಿಗೆ ತರಲಾಗುತ್ತಿತ್ತು ಎಂದು ಅವರು ಹೇಳಿದರು.

ಡಿಆಆರ್‌ಐನ ಮುಂಬೈ ವಲಯ ಘಟಕವು ಕೊಕೇನ್ ರವಾನಿಸುತ್ತಿರುವ ಬಗ್ಗೆ ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದೆ. ಅದರಂತೆ, ಡಿಆರ್‌ಐ ಅಧಿಕಾರಿಗಳ ಸಮ್ಮುಖದಲ್ಲಿ ಕಂಟೈನರ್ ಅನ್ನು ಗುರುತಿಸಿ ಪರಿಶೀಲಿಸಿದಾಗ, ಉತ್ತಮ ಗುಣಮಟ್ಟದ ಕೊಕೇನ್‌ನ ತಲಾ 1 ಕೆಜಿ ತೂಕದ ಪೊಟ್ಟಣಗಳನ್ನು ಹಸಿರು ಸೇಬುಗಳ ಬಾಕ್ಸ್‌ಗಳಲ್ಲಿ ಇರಿಸಲಾಗಿತ್ತು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇಂತಹ ಒಟ್ಟು 50 ಪೊಟ್ಟಣಗಳು ಪತ್ತೆಯಾಗಿವೆ. ಅಕ್ರಮ ಮಾರುಕಟ್ಟೆಯಲ್ಲಿ 502 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಪರೀಕ್ಷೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದ ಕಿತ್ತಳೆ ಹಣ್ಣಿನ ಕಂಟೈನರ್‌ನಿಂದ 198 ಕೆ.ಜಿ ಮೆಥ್ ಮತ್ತು 9 ಕೆ.ಜಿ ಕೊಕೇನ್ ಅನ್ನು ವಾಶಿಯಲ್ಲಿ ವಶಪಡಿಸಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಈಗ ಅದೇ ಆಮದುದಾರರು ಭಾರತಕ್ಕೆ ಕಂಟೈನರ್ ತಂದಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಡಿಆರ್‌ಐ ಅಧಿಕಾರಿಗಳು ಆಮದುದಾರನನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT