ಪ್ರಧಾನಿ ನರೇಂದ್ರ ಮೋದಿ 
ದೇಶ

ಮಿಷನ್ 2024: 144 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್‍ಯಾಲಿಗೆ ಬಿಜೆಪಿ ಪ್ಲಾನ್

2024ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಜನ್ ಗಟ್ಟಲೇ ಮೆಗಾ ರ್‍ಯಾಲಿ ಆಯೋಜಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಜನ್ ಗಟ್ಟಲೇ ಮೆಗಾ ರ್‍ಯಾಲಿ ಆಯೋಜಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ. ಇವುಗಳಲ್ಲಿ ಬಹುತೇಕ ಕ್ಷೇತ್ರಗಳನ್ನು 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ಕಳೆದುಕೊಂಡಿತ್ತು. ಈ ಸ್ಥಾನಗಳಲ್ಲಿ ಪಕ್ಷ ಸಂಘಟನೆಗೆ 'ಕ್ಲಸ್ಟರ್ ಯೋಜನೆ'ಯೊಂದನ್ನು ಬಿಜೆಪಿ ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಸ್ತೃತ ಯೋಜನೆಯ ಮೊದಲ ಹಂತದಲ್ಲಿ, ಹಲವಾರು ಕೇಂದ್ರ ಸಚಿವರು ಈ ಸ್ಥಾನಗಳಿಗೆ ಭೇಟಿ ನೀಡಿ,  ಬಿಜೆಪಿ ಕಾರ್ಯಕರ್ತರು ಮತ್ತು ಸಮಾಜದ ವಿವಿಧ ಹಂತಗಳ ಜನರೊಂದಿಗೆ ಸಭೆಗಳನ್ನು ನಡೆಸುವಂತೆ ಸೂಚಿಸಲಾಗಿತ್ತು.  ಕಳೆದ ತಿಂಗಳು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಕ್ಲಸ್ಟರ್ ಯೋಜನೆಯ ಪ್ರಗತಿಯನ್ನು ನಿರ್ಣಯಿಸಲು ವಿವಿಧ ಕೇಂದ್ರ ಸಚಿವರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು. ಈಗ ಯೋಜನೆಯ 2 ನೇ ಹಂತದ ಭಾಗವಾಗಿ 144 ಲೋಕಸಭಾ ಸ್ಥಾನಗಳನ್ನು ಒಳಗೊಂಡಂತೆ ಪ್ರಧಾನಿ ಮೋದಿ ಅವರಿಂದ ಮೆಗಾ ರ್‍ಯಾಲಿ ನಡೆಸಲು ಯೋಜಿಸಲಾಗಿದೆ  ಎಂದು ಮೂಲಗಳು ಹೇಳಿವೆ.

ಇವುಗಳಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ (ಸೋನಿಯಾ ಗಾಂಧಿ, ಕಾಂಗ್ರೆಸ್) ಮತ್ತು ಮೈನ್‌ಪುರಿ (ಮುಲಾಯಂ ಸಿಂಗ್ ಯಾದವ್, ಎಸ್‌ಪಿ) ಮಹಾರಾಷ್ಟ್ರದ ಬಾರಾಮತಿ (ಸುಪ್ರಿಯಾ ಸುಳೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ); ಪಶ್ಚಿಮ ಬಂಗಾಳದ ಜಾಧವಪುರ (ಮಿಮಿ ಚಕ್ರವರ್ತಿ, ಟಿಎಂಸಿ); ತೆಲಂಗಾಣದ ಮಹಬೂಬ್‌ನಗರ (ಶ್ರೀನಿವಾಸ್ ರೆಡ್ಡಿ, ಟಿಆರ್‌ಎಸ್) ಮತ್ತು ಮಧ್ಯಪ್ರದೇಶದ ಚಿಂದ್ವಾರ (ನಕುಲ್ ನಾಥ್, ಕಾಂಗ್ರೆಸ್) ಕ್ಷೇತ್ರಗಳಿವೆ.

 ಈ 144 ಲೋಕಸಭಾ ಸ್ಥಾನಗಳಲ್ಲಿ ಬಹುಮತ ಗಳಿಸುವ ಗುರಿಯನ್ನು ಬಿಜೆಪಿ ವರಿಷ್ಠರು ಹೊಂದಿದ್ದಾರೆ. ಇದಕ್ಕಾಗಿ ಪಕ್ಷ ಸಮಿತಿಯೊಂದನ್ನು ರಚಿಸಿದೆ. ಇದು ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದೆ.  2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT