ಪ್ರಾತಿನಿಧಿಕ ಚಿತ್ರ 
ದೇಶ

ಮೇಕೆಗಳು ಕಾಣೆಯಾದ ವಿಚಾರ: ತಮಿಳುನಾಡಿನಲ್ಲಿ ರೈತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಪೊಲೀಸರ ಪ್ರಕಾರ, ಚಿನ್ನಸಾಮಿ ಅವರಿಗೆ ಸೇರಿದ ಕೆಲವು ಮೇಕೆಗಳು ಶನಿವಾರ ಸಂಜೆ ಇಲ್ಲಿಗೆ ಸಮೀಪದ ಮಂಧರೈಕ್ಕಾಡು ಪ್ರದೇಶದಲ್ಲಿನ ಅವರ ಜಮೀನಿನಲ್ಲಿ ಕಾಣೆಯಾಗಿವೆ. ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂತ್ರಸ್ತನ ಸಂಬಂಧಿಕರೊಬ್ಬರು ರಂಜಿತ್ ಕುಮಾರ್ (28) ಎಂಬಾತನ ಕಡೆಗೆ ಬೆರಳು ತೋರಿಸಿದರು. ಆತ ಗ್ರಾಮದಲ್ಲಿ ಮೇಕೆ ಕಳವು ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಂಜಿತ್ ತನ್ನ ಮನೆಯಿಂದ ಹೊರ ಹೋಗುತ್ತಿರುವುದನ್ನು ಗಮನಿಸಿದ ಚಿನ್ನಸಾಮಿ, ತಕ್ಷಣವೇ ಆತನನ್ನು ತಡೆದು ಕೇಳಿದ್ದಾನೆ. ಬಳಿಕ ಜಗಳವಾಡಿದ್ದಾನೆ. ತಾನು ಯಾವುದೇ ಮೇಕೆಗಳನ್ನು ಕದ್ದಿಲ್ಲ ಎಂದು ರಂಜಿತ್ ಹೇಳಿದರೂ, ಚಿನ್ನಸಾಮಿ ಆತನಿಗೆ ಥಳಿಸಿದ್ದಾರೆ.

ಬಳಿಕ ಸ್ಥಳದಿಂದ ಹೊರಟ ರಂಜಿತ್, ಮಧ್ಯರಾತ್ರಿಯ ಸುಮಾರಿಗೆ ದೇಸೀಯ ಸಿಂಗಲ್ ಬ್ಯಾರೆಲ್ ಗನ್‌ನೊಂದಿಗೆ ಹಿಂತಿರುಗಿ ಚಿನ್ನಸಾಮಿಯ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಂಜಿತ್ ಕುಮಾರ್ ಅವರನ್ನು ಬಂಧಿಸಿ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ