ಪ್ರಾತಿನಿಧಿಕ ಚಿತ್ರ 
ದೇಶ

ಮೇಕೆಗಳು ಕಾಣೆಯಾದ ವಿಚಾರ: ತಮಿಳುನಾಡಿನಲ್ಲಿ ರೈತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಪೊಲೀಸರ ಪ್ರಕಾರ, ಚಿನ್ನಸಾಮಿ ಅವರಿಗೆ ಸೇರಿದ ಕೆಲವು ಮೇಕೆಗಳು ಶನಿವಾರ ಸಂಜೆ ಇಲ್ಲಿಗೆ ಸಮೀಪದ ಮಂಧರೈಕ್ಕಾಡು ಪ್ರದೇಶದಲ್ಲಿನ ಅವರ ಜಮೀನಿನಲ್ಲಿ ಕಾಣೆಯಾಗಿವೆ. ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂತ್ರಸ್ತನ ಸಂಬಂಧಿಕರೊಬ್ಬರು ರಂಜಿತ್ ಕುಮಾರ್ (28) ಎಂಬಾತನ ಕಡೆಗೆ ಬೆರಳು ತೋರಿಸಿದರು. ಆತ ಗ್ರಾಮದಲ್ಲಿ ಮೇಕೆ ಕಳವು ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಂಜಿತ್ ತನ್ನ ಮನೆಯಿಂದ ಹೊರ ಹೋಗುತ್ತಿರುವುದನ್ನು ಗಮನಿಸಿದ ಚಿನ್ನಸಾಮಿ, ತಕ್ಷಣವೇ ಆತನನ್ನು ತಡೆದು ಕೇಳಿದ್ದಾನೆ. ಬಳಿಕ ಜಗಳವಾಡಿದ್ದಾನೆ. ತಾನು ಯಾವುದೇ ಮೇಕೆಗಳನ್ನು ಕದ್ದಿಲ್ಲ ಎಂದು ರಂಜಿತ್ ಹೇಳಿದರೂ, ಚಿನ್ನಸಾಮಿ ಆತನಿಗೆ ಥಳಿಸಿದ್ದಾರೆ.

ಬಳಿಕ ಸ್ಥಳದಿಂದ ಹೊರಟ ರಂಜಿತ್, ಮಧ್ಯರಾತ್ರಿಯ ಸುಮಾರಿಗೆ ದೇಸೀಯ ಸಿಂಗಲ್ ಬ್ಯಾರೆಲ್ ಗನ್‌ನೊಂದಿಗೆ ಹಿಂತಿರುಗಿ ಚಿನ್ನಸಾಮಿಯ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಂಜಿತ್ ಕುಮಾರ್ ಅವರನ್ನು ಬಂಧಿಸಿ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT