ದೇಶ

ಗುವಾಹಟಿಯ ಐಐಟಿಯಲ್ಲಿ ಆಂಧ್ರಪ್ರದೇಶ ಮೂಲದ 20 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ramyashree GN

ಗುವಾಹಟಿ: ಆಂಧ್ರಪ್ರದೇಶ ಮೂಲದ 20 ವರ್ಷದ ವಿದ್ಯಾರ್ಥಿ ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿದ್ಯಾರ್ಥಿಯನ್ನು ಗುಡ್ಲ ಮಹೇಶ್ ಸಾಯಿ ರಾಜ್ ಎಂದು ಗುರುತಿಸಲಾಗಿದ್ದು, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಐದನೇ ಸೆಮಿಸ್ಟರ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಮಾನಸಿಕ ಒತ್ತಡದಿಂದ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅಮಿಂಗ್‌ಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾಸ್ಟೆಲ್ ಕಟ್ಟಡವೊಂದರಲ್ಲಿ ಯುವಕನ ಶವ ಪತ್ತೆಯಾಗಿದ್ದು, ಅದನ್ನು ಸಂಸ್ಥೆಯ ಮಾಜಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ ಎಂದು ಐಐಟಿಜಿ ಹೇಳಿಕೆಯಲ್ಲಿ ತಿಳಿಸಿದೆ.

ಐಐಟಿ ಮೂಲದ ಪ್ರಕಾರ, 'ಕಳಪೆ ಶೈಕ್ಷಣಿಕ ಸಾಧನೆ'ಯಿಂದಾಗಿ ವಿದ್ಯಾರ್ಥಿಯನ್ನು ತನ್ನ ಕೋರ್ಸ್‌ನಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆತನ ಕುಟುಂಬಕ್ಕೆ ಮಾಹಿತಿ ನೀಡಿದೆ ಮತ್ತು ಅವರು ಕ್ಯಾಂಪಸ್‌ಗೆ ತಲುಪಿದ್ದಾರೆ. ಈ ಸಮಯದಲ್ಲಿ ಕುಟುಂಬಕ್ಕೆ ಐಐಟಿ ಗುವಾಹಟಿ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

'ನಾವು ಪೊಲೀಸ್ ತನಿಖೆಯೊಂದಿಗೆ ಸಹಕರಿಸುತ್ತೇವೆ ಮತ್ತು ಈ ವಿಷಯದ ಬಗ್ಗೆ ಆಂತರಿಕ ತನಿಖೆಯನ್ನು ಸಹ ನಿಯೋಜಿಸುತ್ತೇವೆ' ಎಂದೂ ಹೇಳಿಕೆಯಲ್ಲಿ ಸೇರಿಸಲಾಗಿದೆ.

SCROLL FOR NEXT