ಏಕನಾಥ್ ಶಿಂಧೆ - ಉದ್ಧವ್ ಠಾಕ್ರೆ 
ದೇಶ

ಮಹಾ ಉಪಚುನಾವಣೆ: ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣಕ್ಕೆ ಹೊಸ ಹೆಸರು, ಚಿಹ್ನೆ ನೀಡಿದ ಚುನಾವಣಾ ಆಯೋಗ

ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಉಪಚುನಾವಣೆಯಲ್ಲಿ ಹೊಸ ಹೆಸರು ಮತ್ತು ಚಿಹ್ನೆಯನ್ನು ನೀಡಲಾಗಿದೆ. ಠಾಕ್ರೆ ಬಣಕ್ಕೆ ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಎಂದು ಕರೆಯಲಾಗುವುದು ಮತ್ತು ಅದರ ಹೊಸ ಪಕ್ಷದ ಚಿಹ್ನೆ ಪಂಜು...

ನವದೆಹಲಿ: ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಉಪಚುನಾವಣೆಯಲ್ಲಿ ಹೊಸ ಹೆಸರು ಮತ್ತು ಚಿಹ್ನೆಯನ್ನು ನೀಡಲಾಗಿದೆ. ಠಾಕ್ರೆ ಬಣಕ್ಕೆ ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಎಂದು ಕರೆಯಲಾಗುವುದು ಮತ್ತು ಅದರ ಹೊಸ ಪಕ್ಷದ ಚಿಹ್ನೆ ಪಂಜು ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. 

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ಬಾಳಾಸಾಹೇಬಾಂಚಿ ಶಿವಸೇನೆ (ಬಾಳಾಸಾಹೇಬನ ಶಿವಸೇನೆ) ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೂರು ಹೊಸ ಆಯ್ಕೆಗಳನ್ನು ನೀಡುವಂತೆ ಚುನಾವಣಾ ಆಯೋಗವು ಪಕ್ಷ ಕೇಳಿರುವುದರಿಂದ ಶಿಂಧೆ ಬಣಕ್ಕೆ ಇನ್ನೂ ಪಕ್ಷದ ಚಿಹ್ನೆಯನ್ನು ನೀಡಲಾಗಿಲ್ಲ. ಈ ಹಿಂದೆ ಎರಡೂ ಬಣಗಳು ಪ್ರಸ್ತಾಪಿಸಿದ ಗದೆ (ಮೊಂಡಾದ ಗದೆ) ಮತ್ತು ತ್ರಿಶೂಲ (ತ್ರಿಶೂಲ) ಧಾರ್ಮಿಕ ಚಿಹ್ನೆಗಳಾಗಿರುವುದರಿಂದ ಚುನಾವಣಾ ಆಯೋಗ ತಿರಸ್ಕರಿಸಿತ್ತು.

ಮಂಗಳವಾರ ಬೆಳಗ್ಗೆ 10 ಗಂಟೆಯೊಳಗೆ ಮೂರು ಚಿಹ್ನೆಗಳ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ಶಿಂಧೆ ಬಣಕ್ಕೆ ಚುನಾವಣಾ ಆಯೋಗ ಸೂಚಿಸಿದೆ.

ಶಿವಸೇನೆಯ ಠಾಕ್ರೆ ಬಣ ಮೂರು ಹೆಸರು ಮತ್ತು ಚಿಹ್ನೆಗಳ ಪಟ್ಟಿಯನ್ನು ನೀಡಿತ್ತು. ‘ಶಿವಸೇನಾ ಬಾಳಾಸಾಹೇಬ್ ಠಾಕ್ರೆ’ ಮೊದಲ ಆಯ್ಕೆ, ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎರಡನೇ ಆಯ್ಕೆ, ‘ಶಿವಸೇನಾ ಬಾಳಾಸಾಹೇಬ್ ಪ್ರಬೋಧಂಕರ್ ಠಾಕ್ರೆ’ ಮೂರನೇ ಆಯ್ಕೆಯಾಗಿತ್ತೆಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

“ನೈಜ” ಶಿವಸೇನೆ ಎಂಬ ಪ್ರತಿಸ್ಪರ್ಧಿ ಬಣಗಳ ನಡುವಿನ ಜಗಳದ ಮಧ್ಯೆ ಶಿವಸೇನೆ ಚಿಹ್ನೆ ಮತ್ತು ಹೆಸರನ್ನು ಚುನಾವಣಾ ಆಯೋಗ ತಡೆಹಿಡಿದಿರುವುದನ್ನು ಠಾಕ್ರೆ ಪ್ರಶ್ನಿಸಿದ್ದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶನಿವಾರದ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ವಿಚಾರಣೆಯಿಲ್ಲದೆ ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಮುಂಬೈನ ಅಂಧೇರಿ ಪೂರ್ವ ಕ್ಷೇತ್ರದಲ್ಲಿ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಗೆ ಹೊಸ ಹೆಸರುಗಳು ಮತ್ತು ಚಿಹ್ನೆಗಳನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ ಠಾಕ್ರೆ ಮತ್ತು ಪ್ರತಿಸ್ಪರ್ಧಿ ಶಿಂಧೆ ಬಣವನ್ನು ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!