ಎಂ ಕೆ ಸ್ಟಾಲಿನ್ 
ದೇಶ

ಹೊಸ ಭಾಷಾ ಸಮರ ಆರಂಭಿಸಬೇಡಿ, ದೇಶದಲ್ಲಿ ಏಕತೆ ಎತ್ತಿ ಹಿಡಿಯಿರಿ: ಕೇಂದ್ರಕ್ಕೆ ತಮಿಳು ನಾಡು ಸಿಎಂ ಸ್ಟಾಲಿನ್ ಒತ್ತಾಯ

ಹಿಂದಿಯನ್ನು ಕಡ್ಡಾಯ ಭಾಷೆಯನ್ನಾಗಿ ಹೇರುವ ಮೂಲಕ ಮತ್ತೊಂದು “ಭಾಷಾ ಯುದ್ಧ” ಆರಂಭಿಸುವುದರ ವಿರುದ್ಧ ಕೇಂದ್ರ ಸರ್ಕಾರವನ್ನು ಎಚ್ಚರಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ಕೈಬಿಟ್ಟು ಭಾರತದ ಏಕತೆಯನ್ನು ಎತ್ತಿ ಹಿಡಿಯುವಂತೆ ಪ್ರಧಾನಿ ಮೋದಿ ಮತ್ತು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಚೆನ್ನೈ: ಹಿಂದಿಯನ್ನು ಕಡ್ಡಾಯ ಭಾಷೆಯನ್ನಾಗಿ ಹೇರುವ ಮೂಲಕ ಮತ್ತೊಂದು “ಭಾಷಾ ಯುದ್ಧ” ಆರಂಭಿಸುವುದರ ವಿರುದ್ಧ ಕೇಂದ್ರ ಸರ್ಕಾರವನ್ನು ಎಚ್ಚರಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ಕೈಬಿಟ್ಟು ಭಾರತದ ಏಕತೆಯನ್ನು ಎತ್ತಿ ಹಿಡಿಯುವಂತೆ ಪ್ರಧಾನಿ ಮೋದಿ ಮತ್ತು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸದೀಯ ಸಮಿತಿಯು ಎಲ್ಲಾ ಕೇಂದ್ರೀಯ ತಾಂತ್ರಿಕ ಮತ್ತು ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಬೇಕೆಂಬ ಶಿಫಾರಸಿನ ಕುರಿತು ಸುದ್ದಿ ವರದಿಗಳಿಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಈ ಸಂಸ್ಥೆಗಳಲ್ಲಿ ಐಐಟಿಗಳು, ಐಐಎಂಗಳು, ಎಐಐಎಂಎಸ್ ಮತ್ತು ಕೇಂದ್ರೀಯ ವಿದ್ಯಾಲಯಗಳು ಸೇರಿವೆ. ಹಿಂದಿ ಭಾಷೆಯನ್ನು ಕಡ್ಡಾಯವಾಗಿ ಹೇರುವ ಮೂಲಕ ದೇಶದ ಏಕತೆಗೆ ಇದು ಅಡ್ಡಿಯನ್ನುಂಟುಮಾಡುತ್ತದೆ. ಸಮಿತಿಯು ಭಾರತದಾದ್ಯಂತ ಹಿಂದಿಯನ್ನು ಸಾಮಾನ್ಯ ಭಾಷೆಯನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿದೆ ಎಂದು ಹೇಳಿದರು.

ಸಂವಿಧಾನದ ಎಂಟನೇ ಶೆಡ್ಯೂಲ್ ತಮಿಳು ಸೇರಿದಂತೆ 22 ಭಾಷೆಗಳನ್ನು ಸಮಾನವಾಗಿ ಪರಿಗಣಿಸುವ ಅರ್ಹತೆ ಎಂದು ಪಟ್ಟಿ ಮಾಡಿದೆ ಎಂದು ಗಮನಸೆಳೆದ ಸ್ಟಾಲಿನ್ ಅವರು, ಸಮಿತಿಯು ಹಿಂದಿಯನ್ನು ಭಾರತದ ಸಾಮಾನ್ಯ ಭಾಷೆಯಾಗಿ ಶಿಫಾರಸು ಮಾಡುವ ಅವಶ್ಯಕತೆ ಎಲ್ಲಿಂದ ಉದ್ಭವಿಸಿತು ಎಂದು ಕೇಳಿದರು. "ಹಿಂದಿಗೆ ಆದ್ಯತೆ ನೀಡಲು ಕೇಂದ್ರ ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ಏಕೆ ಸ್ಥಗಿತಗೊಳಿಸಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಪ್ರಶ್ನಿಸಿದರು. 

ಇಡೀ ದೇಶಕ್ಕೆ ಒಂದು ಭಾಷೆಯನ್ನು ಸಾಮಾನ್ಯವಾಗಿಸುವುದು ಪ್ರಾಯೋಗಿಕವಾಗಿ ಅಸಾಧ್ಯವೆಂದು ಪ್ರತಿಪಾದಿಸಿದ ಅವರು, ಅದನ್ನು ಕಡ್ಡಾಯಗೊಳಿಸುವುದು ಕೇವಲ ಹಿಂದಿ ಭಾಷಿಕರು ಮಾತ್ರ ಭಾರತದ ನಿಜವಾದ ನಾಗರಿಕರು ಎಂದು ಹೇಳುವುದು, ಇತರ ಭಾಷೆಗಳನ್ನು ಮಾತನಾಡುವವರು ಎರಡನೇ ದರ್ಜೆಯ ನಾಗರಿಕರು ಎಂದು ಹೇಳುವುದು ಸರಿಯಲ್ಲ ಎಂದು ಸ್ಟಾಲಿನ್ ಕೇಂದ್ರದ ನಡೆಯನ್ನು ವಿರೋಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT