ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಪತ್ನಿ ಕೊಲ್ಲಲೆಂದು ಸಂಚು ರೂಪಿಸಿದ್ದ ಪತಿ; ಬಲಿಯಾಗಿದ್ದು ಅತ್ತೆ!

ಪತ್ನಿಯನ್ನು ಸಾಯಿಸುವ ದುರುದ್ದೇಶದಿಂದ ಕಬ್ಬಿಣದ ಬಾಗಿಲಿಗೆ ಜೋಡಿಸಿಟ್ಟಿದ್ದ ವೈರ್‌ನಿಂದ ಅತ್ತೆಯ ಮೇಲೆ ವಿದ್ಯುತ್‌ ಪ್ರವಹಿಸಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಬೆಟುಲ್‌ನಲ್ಲಿ ನಡೆದಿದೆ.

ಬೆಟುಲ್‌: ಪತ್ನಿಯನ್ನು ಸಾಯಿಸುವ ದುರುದ್ದೇಶದಿಂದ ಕಬ್ಬಿಣದ ಬಾಗಿಲಿಗೆ ಜೋಡಿಸಿಟ್ಟಿದ್ದ ವೈರ್‌ನಿಂದ ಅತ್ತೆಯ ಮೇಲೆ ವಿದ್ಯುತ್‌ ಪ್ರವಹಿಸಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಬೆಟುಲ್‌ನಲ್ಲಿ ನಡೆದಿದೆ.

ಮಧ್ಯಪ್ರದೇಶದ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೈಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ವಿಪರೀತ ಮದ್ಯಪಾನ ಮಾಡುತ್ತಿದ್ದ ಪತಿ ದಿನಂಪ್ರತಿ ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದ ಅಲ್ಲದೆ, ತನ್ನ ಪತಿಯನ್ನು ಮದ್ಯಪಾನದ ಚಟದಿಂದ ಬಿಡಿಸಬೇಕೆಂದು ಪ್ರಯತ್ನ ನಡೆಸಿದ್ದಾಳೆ, ಆದರೆ ದಂಪತಿಗಳ ನಡುವೆ ಭಾನುವಾರವೂ ಕಲಹ ನಡೆದಿದೆ, ಇದರಿಂದ ಮನನೊಂದ ಪತ್ನಿ ತನ್ನ ತಾಯಿಯ ಮನೆಗೆ ಹೋಗಿದ್ದಾಳೆ.

ಪತ್ನಿ ತನ್ನನ್ನು ಬಿಟ್ಟು ತಾಯಿ ಮನೆಗೆ ಹೋದ ವಿಚಾರದಲ್ಲಿ ಸಿಟ್ಟಿಗೆದ್ದ ಪತಿರಾಯ ಪತ್ನಿಯನ್ನು ಹೇಗಾದರೂ ಮಾಡಿ ಕೊಲ್ಲಬೇಕೆಂದು ಸಂಚು ರೂಪಿಸಿದ, ಅದರಂತೆ ಪತಿ, ತನ್ನ ಪತ್ನಿಯ ತಾಯಿ ಮನೆಗೆ ಹೋಗಿದ್ದಾನೆ.

ಈ ವೇಳೆ ಅಲ್ಲಿ ಕಬ್ಬಿಣದ ಬಾಗಿಲನ್ನು ಗಮನಿಸಿದ್ದಾನೆ ಇದಕ್ಕೆ ವಿದ್ಯುತ್ ಸಂಪರ್ಕ ಕೊಟ್ಟು ಪತ್ನಿಯನ್ನು ಕೊಲ್ಲುವ ಉದ್ದೇಶ ಇಟ್ಟುಕೊಂಡು ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿ ಬಾಗಿಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಏನೂ ಗೊತ್ತಿಲದವರಂತೆ ಹೊರಗೆ ಬಂದು ಕುಳಿತಿದ್ದಾನೆ. ಆದರೆ ದುರದೃಷ್ಟವಶಾತ್ ಪತ್ನಿ ಹೋಗುವ ಬದಲಿಗೆ ಅತ್ತೆ ಆ ಬಾಗಿಲನ್ನು ಸ್ಪರ್ಶಿಸಿದ್ದಾರೆ ಗಂಭೀರ ಗಾಯಗೊಂಡ ಅತ್ತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪತಿ ಸ್ಥಳದಿಂದ ಪರಾರಿಯಾಗಿದ್ದು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT