ಸಂಜಯ್ ರಾವತ್ 
ದೇಶ

ಶಿವಸೇನೆಗೆ ದ್ರೋಹ ಮಾಡುವಂತೆ ಒತ್ತಡ; ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದೆ: ತಾಯಿಗೆ ಬರೆದ ಪತ್ರದಲ್ಲಿ ರಾವತ್

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸದ್ಯ ಜೈಲು ಸೇರಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ತಮ್ಮ ಪಕ್ಷಕ್ಕೆ ದ್ರೋಹ ಬಗೆಯುವಂತೆ ನನ್ನ ಮೇಲೆ ಒತ್ತಡವಿತ್ತು ಮತ್ತು ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದಿದ್ದೇನೆ...

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸದ್ಯ ಜೈಲು ಸೇರಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ತಮ್ಮ ಪಕ್ಷಕ್ಕೆ ದ್ರೋಹ ಬಗೆಯುವಂತೆ ನನ್ನ ಮೇಲೆ ಒತ್ತಡವಿತ್ತು ಮತ್ತು ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಬಂಧನಕ್ಕೊಳಗಾದ ಒಂದು ವಾರದ ನಂತರ ಆಗಸ್ಟ್ 8 ರಂದು ತನ್ನ ತಾಯಿಗೆ ಬರೆದ ಪತ್ರದಲ್ಲಿ ರಾವತ್ ಅವರು,  ಶಿವಸೇನೆಗೆ ದ್ರೋಹ ಬಗೆಯುವಂತೆ ನನ್ನ ಮೇಲೆ ಒತ್ತಡವಿತ್ತು. ಆದರೆ ಅದಕ್ಕೆ ಕಿವಿಗೊಡದ ಕಾರಣ ನಾನು ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ತಮ್ಮನ್ನು ಸುಳ್ಳು ಮತ್ತು ಬೋಗಸ್ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಎಲ್ಲರಿಗೂ ತಿಳಿದಿದೆ. ಗನ್ ಪಾಯಿಂಟ್‌ನಲ್ಲಿ ನನ್ನಿಂದ ಹೇಳಿಕೆಗಳನ್ನು ಪಡೆಯಲಾಗಿದೆ ಎಂದು ರಾವತ್ ಆರೋಪಿಸಿದ್ದಾರೆ.

ಮುಂಬೈನಲ್ಲಿನ ಪತ್ರಾ 'ಚಾಲ್' ಮರುಅಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ(ಇಡಿ) ರಾವತ್ ಅವರನ್ನು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT