ಶಶಿ ತರೂರ್ 
ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ

ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ನಾಯಕರು ನನ್ನ ಜೊತೆಗಿನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸ್ವಾಗತ ಕೋರಿದ್ದಾರೆ ಎಂದು ತರೂರ್ ಹೇಳಿದ್ದಾರೆ.

2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ಮತದಾರರನ್ನು ಮತ್ತೆ ಕರೆತರುವ ಗುರಿ ಹೊಂದಿದ್ದೇನೆ. ಎಐಸಿಸಿ ಅಧ್ಯಕ್ಷನಾಗಿ ಚುನಾಯಿತನಾದರೆ ಸಿಡಬ್ಲ್ಯೂಸಿ ಚುನಾವಣೆ ನಡೆಸಿ ಪಕ್ಷದ ಸಂವಿಧಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದಾಗಿ ಎಂದು ಅವರು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT