ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ

Nagaraja AB

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ನಾಯಕರು ನನ್ನ ಜೊತೆಗಿನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸ್ವಾಗತ ಕೋರಿದ್ದಾರೆ ಎಂದು ತರೂರ್ ಹೇಳಿದ್ದಾರೆ.

2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ಮತದಾರರನ್ನು ಮತ್ತೆ ಕರೆತರುವ ಗುರಿ ಹೊಂದಿದ್ದೇನೆ. ಎಐಸಿಸಿ ಅಧ್ಯಕ್ಷನಾಗಿ ಚುನಾಯಿತನಾದರೆ ಸಿಡಬ್ಲ್ಯೂಸಿ ಚುನಾವಣೆ ನಡೆಸಿ ಪಕ್ಷದ ಸಂವಿಧಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದಾಗಿ ಎಂದು ಅವರು ಭರವಸೆ ನೀಡಿದ್ದಾರೆ. 

SCROLL FOR NEXT