ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ವಿಶ್ವವಿದ್ಯಾಲಯದ ಇಂಗ್ಲೀಷ್  ವಿಭಾಗದಲ್ಲಿ ತಾನೂ ಹೇಳಿದ ಅಭ್ಯರ್ಥಿಗೆ ಹುದ್ದೆ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಸೆಪ್ಟೆಂಬರ್ 30 ಅಂದು ಅಪರಿಚಿತ ವ್ಯಕ್ತಿಯೊಬ್ಬರಿಂದ ಕುಲಪತಿ ಮಹೇಶ್ ವರ್ಮಾ ಅವರಿಗೆ ಕರೆ ಮಾಡಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕರೆ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಕುಲಪತಿ ಲೆಫ್ಟಿನೆಂಟ್ ಗವರ್ನರ್ ಸಚಿವಾಲಯವನ್ನು ಸಂಪರ್ಕಿಸಿದ್ದಾರೆ. ಆ ಸಂದರ್ಭದಲ್ಲಿ ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದು ತಿಳಿದುಬಂದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. 

ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಕರೆ ಮಾಡಿದ್ದಕ್ಕೆ ಅಕ್ಟೋಬರ್ 2 ರಂದು ದ್ವಾರಕಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿತ್ತು. ನಂತರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಯಿತು. "ತನಿಖೆಯ ಸಮಯದಲ್ಲಿ,  ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರೋಪಿ ಎಂದು ಗುರುತಿಸಲಾಗಿದೆ. ಅವರು ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ತನ್ನ ಸಹೋದರಿಯ ನೇಮಕಾತಿಗಾಗಿ ಕರೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT